ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕು ಚಿಕ್ಕಜೇನಿ ಗ್ರಾಮದ ಸಮೀಪ ಕೊಳವಳ್ಳಿಯ ಚಂದ್ರೇಗೌಡ ಎಂಬವರ ಮನೆ ಸಮೀಪ ಬಂದಿದ್ದ 14 ಅಡಿ ಉದ್ದದ ಕಾಳಿಂಗ ಸರ್ಪವನ್ನು ಉರಗ ತಜ್ಞ ಪ್ರಭಾಕರ್ ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.
ಬುಧವಾರ ಸಂಜೆ ಕಂಡು ಬಂದ ಈ ಕಾಳಿಂಗ ಸರ್ಪವನ್ನು ಅರಣ್ಯ ಅಧಿಕಾರಿಗಳ ಸಮ್ಮುಖದಲ್ಲಿ ಪ್ರಭಾಕರ್ ಅವರು ರಕ್ಷಣೆ ಮಾಡಿದ್ದಾರೆ. ಈ ಭಾಗದಲ್ಲಿ ನಾಗರ ಹಾವು ಸಾಮಾನ್ಯವಾಗಿ ಕಂಡು ಬರುತ್ತವೆ. ಆದರೆ ಇತ್ತೀಚಿನ ದಿನಗಳಲ್ಲಿ ವಸತಿ ಪ್ರದೇಶಗಳಲ್ಲೂ ಕಾಳಿಂಗ ಸರ್ಪಗಳು ಕಾಣಿಸಿಕೊಳ್ಳತೊಡಗಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
- Advertisement 2
ಯಾವುದೇ ತೊಂದರೆ ಕೊಡದಿದ್ದಲ್ಲಿ ಹಾವುಗಳು ತಮ್ಮ ಪಾಡಿಗೆ ತಾವು ಇರುತ್ತವೆ. ಅವುಗಳನ್ನು ಅವುಗಳ ಪಾಡಿಗೆ ಬಿಡಿ ಎಂದು ಪ್ರಭಾಕರ್ ಸ್ಥಳೀಯರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.