ಚಿತ್ರದುರ್ಗ: ವಿಷಪೂರಿತ ಆಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರೋ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಪಾತಪ್ಪನಗುಡಿ ಗ್ರಾಮದಲ್ಲಿ ನಡೆದಿದೆ.
- Advertisement 2
ಮೃತರು ಬೋಜಪ್ಪ, ಲಕ್ಷ್ಮಿದೇವಿ ದಂಪತಿಯ ಮಕ್ಕಳಾದ ವರ್ಷಿಣಿ(3) ಹಾಗೂ ಜಗದೀಶ್(6) ಎಂದು ಗುರುತಿಸಲಾಗಿದೆ. ರಾತ್ರಿ ಮನೆಯಲ್ಲಿ ಚಿತ್ರಾನ್ನ ಹಾಗು ಮಂಡಕ್ಕಿ ತಿಂಡಿ ತಿಂದು ಮಲಗಿದ್ದರು. ಆದ್ರೆ ತಡರಾತ್ರಿ ತೀವ್ರ ಹೊಟ್ಟೆನೋವು ಹಾಗು ವಾಂತಿ ಭೇದಿ ಕಾಣಿಸಿಕೊಂಡಿತ್ತು. ಪೋಷಕರು ಮಾತ್ರೆ ಕೊಟ್ಟು ಮಲಗಿಸಿದ್ದರು. ಬೆಳಗ್ಗೆ ಚಿಕಿತ್ಸೆಗಾಗಿ ಚಳ್ಳಕೆರೆ ಆಸ್ಪತ್ರೆಗೆ ಕರೆತರುವ ಮಾರ್ಗ ಮಧ್ಯೆ ಇಬ್ಬರೂ ಕೂಡ ಸಾವನ್ನಪ್ಪಿದ್ದಾರೆ.
- Advertisement 3
- Advertisement 4
ಮಕ್ಕಳ ತಂದೆ, ತಾಯಿ ಹಾಗು ತಂಗಿ ಕೂಡ ಅದೇ ಆಹಾರ ಸೇವಿಸಿದ್ರಿಂದ ಅವರನ್ನು ಕೂಡ ತಪಾಸಣೆಗೊಳಪಡಿಸಲಾಗಿದೆ. ಅದೃಷ್ಟವಶಾತ್ ಅವರೆಲ್ಲಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದ್ರೆ ಈ ಇಬ್ಬರು ಮಕ್ಕಳು ಸೇವಿಸಿರೋ ಆಹಾರದಲ್ಲಿ ಹಲ್ಲಿ ಬಿದ್ದಿರೋ ಶಂಕೆ ವ್ಯಕ್ತವಾಗಿದೆ. ಇದ್ದ ಇಬ್ಬರು ಮಕ್ಕಳನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ.
ಈ ಬಗ್ಗೆ ಪರಶುರಾಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.