ಶ್ರೀನಗರ: ಬಸ್ ಪಲ್ಟಿಯಾದ ಪರಿಣಾಮ 20ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದಿದೆ.
ಈ ಘಟನೆ ಬರಾಮುಲ್ಲಾದ ಉರಿಯಲ್ಲಿರುವ ಶ್ರೀನಗರ-ಮುಜಫರಾಬಾದ್ ಹೆದ್ದಾರಿಯಲ್ಲಿ ಸಂಭವಿಸಿದೆ. ಎಸ್ಆರ್ ಟಿಸಿ ಬಸ್ ಇಂದು ಸಲಾಮಾಬಾದ್ ನಿಂದ ಉರಿಗೆ ಹೋಗುತ್ತಿತ್ತು. ಈ ವೇಳೆ ಶ್ರೀನಗರ-ಮುಜಫರಾಬಾದ್ ಹೆದ್ದಾರಿಯಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿದ್ದ ರಸ್ತೆಯ ಕಬ್ಬಿಣದ ಡಿವೈಡರ್ ಗೆ ಡಿಕ್ಕಿ ಹೊಡೆದು ರಸ್ತೆ ಪಕ್ಕದ ಗದ್ದೆಗೆ ಪಲ್ಟಿಯಾಗಿದೆ.
- Advertisement 2
ಬಸ್ ಪಲ್ಟಿಯಾದ ಪರಿಣಾಮ 20 ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯವಾಗಿದೆ. ಕೂಡಲೇ ಸ್ಥಳಿಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದ ಪೊಲೀಸರು ತಕ್ಷಣ ಸ್ಥಳಕ್ಕೆ ದೌಡಾಯಿಸಿ ರಕ್ಷಣೆಯ ಕಾರ್ಯಚರಣೆ ನಡೆಸಿದ್ದಾರೆ.
- Advertisement 3
ಅಪಘಾತದಲ್ಲಿ ಗಾಯಗೊಂಡವರನ್ನು ಆಂಬುಲೆನ್ಸ್ ಮೂಲಕ ಸಮೀಪದ ಆಸ್ಪತ್ರೆಗೆ ರವಾನಿಸಿದ್ದಾರೆ. ಇನ್ನು ಈ ಅಪಘಾತದಲ್ಲಿ 11 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆಯನ್ನು ನಡೆಸಿದ್ದಾರೆ.
- Advertisement 4
#SpotVisuals More than 20 people injured in a bus accident in Baramulla's Uri. The bus met with an accident on Srinagar-Muzaffarabad highway. #JammuAndKashmir pic.twitter.com/B4P9m1HHuF
— ANI (@ANI) April 17, 2018