ಬೆಂಗಳೂರು: 2018ರ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ನಲ್ಲಿ ತಯಾರಿ ಜೋರಗಿ ನಡೆಯುತ್ತಿದ್ದು, ಕಾಂಗ್ರೆಸ್ ಪಕ್ಷ ಹೈಕಮಾಂಡ್ ಪಕ್ಷಾಂತರಿಗಳ ಮೇಲೆ ಕಣ್ಣಿಟ್ಟಿದೆ.
ಈ ಕುರಿತು ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಮತ್ತು ಸಿಎಂ ಸಿದ್ದರಾಮಯ್ಯ ಅವರಿಗೆ ಸೂಚನೆ ನೀಡಿರುವ ರಾಜ್ಯ ಉಸ್ತುವಾರಿ ಕೆ.ಸಿ.ವೇಣಗೋಪಾಲ್ ಪಕ್ಷಾಂತರಕ್ಕೆ ಮನಸ್ಸು ಮಾಡಿರುವವರನ್ನು ಗುರುತಿಸಲು ಸೂಚಿಸಿದ್ದಾರೆ.
2018ರ ಕರ್ನಾಟಕ ವಿಧಾನ ಸಭಾ ಚುನಾವಣೆ ಕಾಂಗ್ರೆಸ್ ಪಕ್ಷಕ್ಕೆ ಅತ್ಯಂತ ಮಹತ್ವ ಚುನಾವಣೆಯಾಗಿದ್ದು, ರಾಷ್ಟ್ರ ಮಟ್ಟದಲ್ಲಿಯು ಪಕ್ಷದ ಬಲವರ್ಧನೆಗೆ ಇದು ಸಹಕಾರಿಯಾಗಲಿದೆ ಎಂದೇ ವಿಶ್ಲೇಷಿಸಲಾಗಿದೆ.
ಪಕ್ಷದ ಗೆಲುವಿನ ಹಾದಿಯಲ್ಲಿ ಯಾರೊಂದಿಗೂ ರಾಜೀ ಮಾಡಿಕೊಳ್ಳುವುದು ಬೇಡ ಎಂದು ತಿಳಿಸಿರುವ ಉಸ್ತುವಾರಿ ವೇಣುಗೋಪಾಲ್, ಶೀಘ್ರವೇ ವರದಿಯನ್ನು ನೀಡಲು ತಿಳಿಸಿದ್ದಾರೆ. ಈ ವರದಿಯು ಕಾಂಗ್ರೆಸ್ ಹೈಕಮಾಂಡ್ಗೆ ಗೌಪ್ಯವಾಗಿ ಸಲ್ಲಿಕೆಯಾಗಲಿದೆ.
ಪಕ್ಷದಿಂದ ಹೊರಹೋಗಲು ಮಾನಸಿಕವಾಗಿ ಸಿದ್ಧರಾಗಿರುವ ಶಾಸಕರು ಯಾರು? ಗೊಂದಲದಲ್ಲಿರುವ ಶಾಸಕರು ಯಾರು ಎಂಬುದರ ಬಗ್ಗೆಯು ವರದಿಯಲ್ಲಿ ಮಾಹಿತಿ ನೀಡಲು ತಿಳಿಸಿದ್ದಾರೆ.
ಈ ವರದಿಯ ಅಧಾರವಾಗಿ ಕಾಂಗ್ರೆಸ್ ಹೈಕಮಾಂಡ್ ಪಕ್ಷದದಿಂದ ಹೊರ ಹೋಗುವವರ ಮನವೊಲಿಸಬೇಕಾ, ಇಲ್ಲಾ ಅಂತಹ ಕ್ಷೇತ್ರದಲ್ಲಿ ಪರ್ಯಾಯ ನಾಯಕತ್ವಕ್ಕೆ ಮಣೆ ಹಾಕಬೇಕಾ ಎಂಬುದರ ಬಗ್ಗೆ ರಾಜ್ಯ ನಾಯಕರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಿದ್ದಾರೆ ಎಂಬ ಮಾಹಿತಿ ಲಭಿಸಿದೆ.
ಚುನಾವಣೆಗೂ ಒಂದು ತಿಂಗಳ ಮುಂಚೆಯೇ ಕಾಂಗ್ರೆಸ್ ಪಕ್ಷದ ಶಾಸಕರ ಅಂತಿಮ ಪಟ್ಟಿ ಸಿದ್ಧಗೊಳ್ಳಲಿದ್ದು, ಗುಪ್ತ ವರದಿಯಲ್ಲಿ ಯಾವ ಶಾಸಕರು ಔಟ್ ಯಾವ ಶಾಸಕರು ಇನ್ ಎಂದುವುದು ಶೀಘ್ರವಾಗಿಯೇ ಹೈ ಕಮಾಂಡ್ ಕೈ ಸೇರಲಿದೆ.