ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಪಕ್ಕದಲ್ಲಿ ಅಳವಡಿಸಿದ್ದ ರಸ್ತೆ ಫಲಕಕ್ಕೆ ಆಲ್ಟೋ ಕಾರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೂವರು ಮೃತಟ್ಟಿದ್ದಾರೆ.
ಈ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4 ರ ಹಿಟ್ನಿ ಕ್ರಾಸ್ ಬಳಿ ನಡೆದಿದೆ. ಮೃತರು ಮಹಾರಾಷ್ಟ್ರ ರಾಜ್ಯದ ಕೊಲ್ಲಾಪುರ ಮೂಲದವರು ಎಂದು ತಿಳಿದು ಬಂದಿದೆ.
ಮೃತರು ವಕೀಲ ವೃತ್ತಿ ಮಾಡುತ್ತಿರಬಹುದೆಂದು ಮೇಲ್ನೋಟಕ್ಕೆ ತಿಳಿದುಬಂದಿದ್ದು, ಗುರುತು ಪತ್ತೆ ಮಾಡಲು ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ. ಸ್ಥಳಕ್ಕೆ ಸಂಕೇಶ್ವರ ಹಾಗೂ ನಿಪ್ಪಾಣಿ ನಗರ ಪೊಲೀಸರು ಭೇಟಿ ನೀಡಿ ಶವಗಳನ್ನು ಹೊರತೆಗೆಯುವ ಕಾರ್ಯವನ್ನು ನಡೆಸಿದ್ದಾರೆ.
ಸಂಕೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.