ಕೋಲಾರ: ನಗರದ ಹೃದಯ ಭಾಗದಲ್ಲಿರುವ ಪ್ರವಾಸಿ ಮಂದಿರದ ಮೇಲೆ ಮಂಗಳವಾರ ರಾತ್ರಿ ಜಿಲ್ಲಾಧಿಕಾರಿ ಜಿ.ಸತ್ಯವತಿ ನೇತೃತ್ವದ ತಂಡ ದಾಳಿ ನಡೆಸಿದೆ.
ಪ್ರವಾಸಿ ಮಂದಿರದಲ್ಲಿ ರಾತ್ರಿ ವೇಳೆ ಅಕ್ರಮ ಚಟುವಟಿಕೆಗಳು ನಡೆಯುತ್ತವೆ, ಹಲವಾರು ಜನ ಅಕ್ರಮವಾಗಿ ಆವರಣದಲ್ಲಿ ಕುಳಿತು ಮದ್ಯ ಸೇವನೆ ಮಾಡೋದು ಜೊತೆಗೆ ಕಾರ್ ಗಳನ್ನು ತಂದು ಪಾರ್ಕ್ ಮಾಡಿ, ಕಾರ್ ನಲ್ಲೇ ಅಕ್ರಮ ಚಟುವಟಿಕೆಗಳು ನಡೆಯುತ್ತವೆ ಎನ್ನುವ ಮಾಹಿತಿ ಮೇರೆಗೆ ಡಿಸಿ ಸತ್ಯವತಿ ದಾಳಿ ಮಾಡಿದರು.
ಇದೇ ವೇಳೆ ಡಿಸಿ ಅಲ್ಲಿಗೆ ಬರುತ್ತಿದ್ದಂತೆ ಅಲ್ಲಿದ್ದ ಜನರೆಲ್ಲಾ ಕುಡಿಯೋದನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಅದರಲ್ಲಿ ಕೆಲವರ ಫೋಟೋಗಳನ್ನು ತೆಗೆದುಕೊಂಡರು. ಈ ವೇಳೆ ಅಲ್ಲಿ ಬಿಟ್ಟು ಓಡಿ ಹೋಗಿದ್ದ ಸುಮಾರು ಎಂಟು ದ್ವಿಚಕ್ರ ವಾಹನಗಳು ಹಾಗೂ ಒಂದು ಕಾರ್ ನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಇದೇ ವೇಳೆ ಲೋಕೋಪಯೋಗಿ ಇಲಾಖೆಗೆ ಸೇರಿದ ಪ್ರವಾಸಿ ಮಂದಿರ ಇದಾಗಿರುವ ಕಾರಣ ಸ್ಥಳಕ್ಕೆ ಬಂದ ಮುಖ್ಯ ಎಂಜಿನಿಯರ್ ಮುನಿ ಆಂಜಿನಪ್ಪ ಅವರಿಗೆ ಡಿಸಿ ಜಿ.ಸತ್ಯವತಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಕೂಡಲೇ ನಿಮ್ಮೆ ಮೇಲೆ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಶಿಫಾರಸ್ಸು ಮಾಡುತ್ತೇನೆ ಎಂದು ಸ್ಥಳದಲ್ಲೇ ಇದೇನು ಐಬಿ ನಾ ಇಲ್ಲಾ ಬಾರ್ ಎಂದು ತರಾಟೆಗೆ ತೆಗೆದುಕೊಂಡರು.
ಇನ್ನು ಮುಂದೆ ಈ ರೀತಿಯ ಅಕ್ರಮ ಚಟುವಟಿಕೆಗಳು ಬಂದ್ ಆಗಬೇಕು ಎಂದು ಎಚ್ಚರಿಕೆ ನೀಡಿದರು. ಅಲ್ಲದೆ ರಸ್ತೆಗಳು ಹಾಳಾಗಿದ್ದು ಕೂಡಲೇ ಅವುಗಳನ್ನು ಸರಿಮಾಡಿ ಎಂದು ಆದೇಶ ಮಾಡಿದರು.