ಮೈಸೂರು: ಜೋಡಿ ಹುಚ್ಚು ಕುದುರೆಗಳು ರಂಪಾಟ ಮಾಡಿ ಜನರಲ್ಲಿ ಆತಂಕ ಸೃಷ್ಟಿಸಿರುವ ಘಟನೆ ನಗರದಲ್ಲಿ ನಡೆದಿದೆ.
ಈ ಜೋಡಿ ಕುದುರೆಗಳು ಅರಸು ರಸ್ತೆಯಿಂದ ಚಾಮರಾಜ ಜೋಡಿ ರಸ್ತೆವರೆಗೆ ಹುಚ್ಚೆದ್ದು ಓಡಾಡಲು ಪ್ರಾರಂಭಿಸಿವೆ. ರಸ್ತೆಯಲ್ಲಿ ಸಿಕ್ಕ ಸಿಕ್ಕವರಿಗೆಲ್ಲಾ ಕಚ್ಚುತ್ತಾ ರಂಪಾಟ ಮಾಡಿವೆ. ಇನ್ನು ಜನರು ಕುದುರೆಗಳ ಹುಚ್ಚಾಟಕ್ಕೆ ಭಯಭೀತರಾಗಿ ದಿಕ್ಕು ಪಾಲಾಗಿ ಓಡಿದ್ದಾರೆ. ಕುದರೆ ದಾಳಿಯಿಂದ ಕೆಲವರು ಗಾಯಗೊಂಡಿದ್ದಾರೆ.
ಸ್ಥಳೀಯರು ತಕ್ಷಣ ಎಚ್ಚೆತ್ತುಕೊಂಡು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ನಂತರ ಪೊಲೀಸರು ಹಾಗೂ ಪಾಲಿಕೆ ಸಿಬ್ಬಂದಿ ಮಾಹಿತಿ ತಿಳಿದು ಕಾರ್ಯಚರಣೆ ಆರಂಭಿಸಿದ್ದಾರೆ. ಆ ಜೋಡಿ ಹುಚ್ಚು ಕುದುರೆಗಳನ್ನು ಸೆರೆ ಹಿಡಿಯಲು ಹರಸಾಹಸ ಪಟ್ಟಿದ್ದಾರೆ. ಕೊನೆಗೆ ಪಾಲಿಕೆಯ ಅಭಯ ತಂಡದವರು ಜೋಡಿ ಕುದುರೆಗಳನ್ನು ಸೆರೆ ಹಿಡಿದು ಸಾರ್ವಜನಿಕರ ಆತಂಕವನ್ನು ದೂರು ಮಾಡಿದ್ದಾರೆ.