ಬೆಂಗಳೂರು: ಇದು ಪಬ್ಲಿಕ್ ಟಿವಿಯ ಬಿಗ್ ಇಂಪ್ಯಾಕ್ಟ್ ಸುದ್ದಿ. ಹೋಟೆಲ್ಗೆ ನುಗ್ಗಿ ಮಾಲೀಕನ ಮೇಲೆ ಎಸಿಪಿ ಮಂಜುನಾಥ್ ಬಾಬು ಹಲ್ಲೆ ಮಾಡಿರೋದು ತಪ್ಪು ಅಂತಾ ಡಿಸಿಪಿ ವರದಿ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳುವಂತೆಯೂ ಡಿಸಿಪಿ ಚೇತನ್ ಸಿಂಗ್ ರಾಥೋಡ್ ಪೊಲೀಸ್ ಆಯುಕ್ತರಿಗೆ ಶಿಫಾರಸ್ಸು ಮಾಡಿದ್ದಾರೆ. ಈ ತಿಂಗಳ 9ರಂದು ಆರ್.ಟಿ.ನಗರ ಪೊಲೀಸ್ ಠಾಣೆಯ ಎಸಿಪಿ ಮಂಜುನಾಥ ಬಾಬು, ಆರ್.ಟಿ.ನಗರದ ದಿಣ್ಣೂರ ರಸ್ತೆಯಲ್ಲಿರುವ ಶೆಟ್ಟಿ ಲಂಚ್ ಹೋಂಗೆ ನುಗ್ಗಿ ಮಾಲೀಕ ರಾಜೀವ್ ಶೆಟ್ಟಿ ಮೇಲೆ ಹಲ್ಲೆ ಮಾಡಿದ್ದರು.
ಶೆಟ್ಟಿ ಲಂಚ್ ಹೋಂ ತಡರಾತ್ರಿವರೆಗೆ (ರಾತ್ರಿ 11-55ರವರೆಗೆ) ತರೆದಿದ್ದ ಮಾಲೀಕ ರಾಜೀವ್ ಶೆಟ್ಟಿ ಮೇಲೆ ಎಸಿಪಿ ಮಂಜುನಾಥ್ ಲಾಟಿಯಿಂದ ಮನಬಂದತೆ ಥಳಿಸಿದ್ದರು. ಪೊಲೀಸರ ದೌಜನ್ಯ ಕಂಡು ಲಂಚ್ ಹೋಂನಲ್ಲಿದ್ದ ಗ್ರಾಹಕರು ಭಯಭೀತಗೊಂಡು ಓಡಿ ಹೋಗಿದ್ದರು.
ಆದರೂ ಬಿಡದೆ ಪೊಲೀಸರು ಲೈಟ್ ಆಫ್ ಮಾಡಿ ಹಿಗ್ಗಾ-ಮುಗ್ಗಾ ಥಳಿಸಿದರೆಂದು ಲಂಚ್ ಹೋಂ ಮಾಲೀಕ ರಾಜೀವ ಶೆಟ್ಟಿ ಆರೋಪಿಸಿದ್ದರು. ಎಸಿಪಿ ಹಲ್ಲೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಈ ಬಗ್ಗೆ ಪಬ್ಲಿಕ್ ಟಿವಿ ಮೊದಲು ಸುದ್ದಿ ಪ್ರಸಾರ ಮಾಡಿತ್ತು.
ಎರಡು ಬಾರಿ ಹೋಟೆಲ್ ವಿರುದ್ಧ ಕೇಸ್ ದಾಖಲಾಗಿ ಅದಕ್ಕೆ ಮಾಲೀಕರು ದಂಡ ಕಟ್ಟಿದ್ದಾರೆ. ಮತ್ತೆ ದೂರು ದಾಖಲು ಮಾಡದೇ ಹಲ್ಲೆ ಮಾಡಿದ್ರಿಂದ ಎಸಿಪಿ ವಿರುದ್ಧ ಕ್ರಮಕ್ಕೆ ಶಿಫಾರಸ್ಸು ಮಾಡಲಾಗಿದೆ.