ಬೆಂಗಳೂರು: ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅಭಿನಯದ `ಟಗರು’ ಚಿತ್ರ ಶುಕ್ರವಾರವಷ್ಟೇ ತೆರೆಕಂಡು ಪ್ರದರ್ಶನ ಕಾಣುತ್ತಿದ್ದರೆ, ಇತ್ತ ಚಿತ್ರದ ನಿರ್ದೇಶಕರ ವಿರುದ್ಧ ಶಿವಣ್ಣ ಅಭಿಮಾನಿಗಳು ಗರಂ ಆಗಿದ್ದಾರೆ.
ಈ ಬಗ್ಗೆ ಅಖಿಲ ಕರ್ನಾಟಕ ಡಾ. ರಾಜ್ ಕುಮಾರ್ ಸೇನಾ ಸಮಿತಿಯಿಂದ ಸುದ್ದಿಗೋಷ್ಠಿ ನಡೆಸಿ, ಸಿನಿಮಾದಲ್ಲಿ ವಿಲನ್ ಗಳು ನಾಯಕ ನಟ ಶಿವಣ್ಣನಿಗೆ ಅವಾಚ್ಯ ಪದಗಳಿಂದ ಬೈಯ್ಯುವ ಸನ್ನಿವೇಶಗಳಿವೆ. ಈ ಕಾರಣಕ್ಕೆ ಶಿವಣ್ಣ ಅಭಿಮಾನಿಗಳು ಸೂರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪೊಗದಸ್ತಾದ ಟಗರು ನೋಡಿ ಜಬರ್ದಸ್ತಾದ ಹೇರ್ ಕಟ್ ಮಾಡಿಸ್ಕೊಂಡ ಅಭಿಮಾನಿ
ಟಗರು ಚಲನಚಿತ್ರದ ನಿರ್ದೇಶಕ ಸೂರಿಯವರು ಕೂಡಲೇ ಸಾರ್ವಜನಿಕವಾಗಿ ಕ್ಷಮೆ ಕೋರಬೇಕಾಗಿ ಅಖಿಲ ಕರ್ನಾಟಕ ಡಾ. ರಾಜ್ ಕುಮಾರ್ ಸೇನಾ ಸಮಿಯ ಅಧ್ಯಕ್ಷ ಹೆಚ್ ಎಸ್ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಪೊಗದಸ್ತಾದ ಟಗರು!
ಕ್ಷಮೆ ಕೇಳದೇ ಹೋದ ಪಕ್ಷದಲ್ಲಿ ಸೂರಿಯವರ ಮುಖಕ್ಕೆ ಮಸಿ ಬಳಿದು, ಅವರು ನಿರ್ದೇಶಿಸಿರುವ ಎಲ್ಲಾ ಚಿತ್ರಗಳನ್ನು ಬಹಿಷ್ಕರಿಸಲು ಕನ್ನಡ ಚಲಚನಚಿತ್ರ ವಾಣಿಜ್ಯ ಮಂಡಳಿ ಮುಂದೆ ಪ್ರತಿಭಟಿಸುತ್ತೇವೆ. ಸೂರಿಯವರನ್ನು ನಿರ್ದೇಶಕ ಸ್ಥಾನದಿಂದ ವಜಾ ಮಾಡುವವರೆಗೆ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಈ ಕುರಿತು ಭಾನುವಾರ ಸಂತೋಷ್ ಥಿಯೇಟರ್ ನಲ್ಲಿ ನಟ ಶಿವರಾಜ್ ಕುಮಾರ್ ಅಭಿಮಾನಿಗಳಿಗೆ ಬುದ್ಧಿ ಹೇಳಿದ್ರು. ನಾನ್ ವಿಲನ್ ಗಳಿಗೆ ಬೈದಾಗ ನೀವುಗಳು ಸಿಳ್ಳೆ ಚಪ್ಪಾಳೆ ಹೊಡಿತೀರಾ. ಅದೇ ನನಗೆ ವಿಲನ್ ಗೆ ಬೈದಾಗ ಯಾಕೆ ಸಹಿಸಲ್ಲ ಅಂತ ಪ್ರಶ್ನಿಸಿದ್ದರು.
ಇದಕ್ಕೂ ಮುಂಚೆ `ಕಡ್ಡಿಪುಡಿ’ ಚಲನಚಿತ್ರದಲ್ಲಿ ಶಿವರಾಜ್ ಕುಮಾರ್ ಅವರನ್ನು ಅವಮಾನಕರ ರೀತಿಯಲ್ಲಿ ನಡೆಸಿಕೊಂಡು ಚಿತ್ರವನ್ನು ಮಾಡಿರುವುದು ಡಾ. ರಾಜ್ ಕುಮಾರ್ ಸೇನಾ ಸಮಿತಿಯು ಪ್ರತಿಭಟನೆ ಮಾಡಿತ್ತು.
ಟಗರು ಚಿತ್ರದಲ್ಲಿ ಪೊಲೀಸ್ ಪಾತ್ರ ಸೇರಿದಂತೆ ಹಲವಾರು ಗೆಟಪ್ಗಳಲ್ಲಿ ಶಿವಣ್ಣ ಮಿಂಚಿದ್ದರೆ, ಖಳನಾಯಕರ ಪಾತ್ರದಲ್ಲಿ ಧನಂಜಯ್ ಮತ್ತು ವಶಿಷ್ಠ ಸಿಂಹ ಅಭಿನಯಿಸಿದ್ದಾರೆ. ಚಿತ್ರದಲ್ಲಿ ಭಾವನಾ ಮೆನನ್ ಮತ್ತು ಮಾನ್ವಿತಾ ಹರೀಶ್ ನಾಯಕಿಯರಾಗಿ ಅಭಿನಯಿಸಿದ್ದಾರೆ.