ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬೆಳ್ತಂಗಡಿಯ ಕಕ್ಕಿಂಜೆ ನಿವಾಸಿ ಹರೀಶ್ ದೇವಾಡಿಗ ಬಂಧಿತ ಆರೋಪಿ. ಅನ್ಯಕೋಮಿನ ಸದಸ್ಯನ ಜೊತೆ ಫೋಟೋ ತೆಗೆದು ಹಂಚಿಕೊಂಡಿದ್ದಕ್ಕೆ ವಿದ್ಯಾರ್ಥಿನಿ, ಎಸ್ಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಮಾಧುರಿಗೆ ಹರೀಶ್ ಬೆದರಿಕೆ ಹಾಕಿದ್ದ ಎನ್ನಲಾಗಿದೆ.
ಈ ಬಗ್ಗೆ ಕಾರ್ಯಾಚರಣೆ ನಡೆಸಿದ ಮಂಗಳೂರು ಪಾಂಡೇಶ್ವರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮಂಗಳೂರಿನ ಪಂಪ್ ವೆಲ್ನಲ್ಲಿ ಹರೀಶ್ನ್ನು ಅರೆಸ್ಟ್ ಮಾಡಲಾಗಿದೆ.