ಬೆಂಗಳೂರು: ಕುಡಿದ ಮತ್ತಿನಲ್ಲಿ ಕಾರು ಚಾಲಕನೊಬ್ಬ ದೊಡ್ಡಗಣಪತಿ ದೇವಾಲಯದ ಭಕ್ತರ ಮೇಲೆ ಕಾರು ಹರಿಸಿದ ಘಟನೆ ಬೆಂಗಳೂರಿನ ರಾಮಮೂರ್ತಿ ನಗರ ರಿಂಗ್ ರಸ್ತೆಯಲ್ಲಿ ನಡೆದಿದೆ.
ಘಟನೆಯಲ್ಲಿ ಹನುಮಂತನಗರದ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಗಣಪತಿ ದೇವಾಲಯದ 8ನೇ ವರ್ಷದ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ನೂರಾರು ಭಕ್ತರು ಜಮಾಯಿಸಿದ್ದರು. ಈ ವೇಳೆ ಜನರಿದ್ದ ಪೆಂಡಾಲ್ಗೆ ಮಾರುತಿ ಜೆನ್ ಕಾರ್ ಡಿಕ್ಕಿ ಹೊಡೆದಿದೆ. ಬಳಿಕ ಭಕ್ತರ ಮೇಲೆ ನುಗ್ಗಿದೆ. ಪರಿಣಾಮ ನಾಲ್ವರಿಗೆ ಗಂಭೀರ ಗಾಯಗಳಾಗಿವೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಡೆದ ತಕ್ಷಣವೇ ಸ್ಥಳದಲ್ಲಿ ಜನರು ನೆರೆದಿದ್ದು, ಕಾರು ಚಾಲಕನನ್ನು ಹಿಡಿಯಲು ಪ್ರಯತ್ನಿಸಿದರಾದರೂ ಆತ ಪರಾರಿಯಾಗಿದ್ದಾನೆ.