ವಿಜಯಪುರ: ಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರಲಿದೆ. ಆದರೆ ಯಡಿಯೂರಪ್ಪ ಹಾಗೂ ಕುಮಾರಸ್ವಾಮಿ ಭ್ರಮೆಯಲ್ಲಿದ್ದಾರೆಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.
ಕೃಷ್ಣಾನದಿಗೆ ಬಾಗಿನ ಅರ್ಪಿಸಲು ಬಾಗಲಕೋಟೆ ಜಿಲ್ಲೆಯ ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಆಗಮಿಸಿ ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಜೆಡಿಎಸ್ ನಿರ್ಣಾಯಕ ಪಾತ್ರ ವಹಿಸುತ್ತದೆ ಎನ್ನುವ ಎಚ್ಡಿಕೆ ಮಾತಿಗೆ ಪ್ರತಿಕ್ರಿಯಿಸಿ, ಜೆಡಿಎಸ್ ಪಾತ್ರ ವಹಿಸಲ್ಲ. ಮುಂದಿನ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷ ಬಹುಮತದಿಂದ ಗೆಲ್ಲಲಿದೆ ಎಂದು ಹೇಳಿದರು.
- Advertisement 2
ಬಿಎಸ್ವೈ ವಿರುದ್ಧ ಖಾಸಗಿ ವ್ಯಕ್ತಿ ಎಸಿಬಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಆದರೆ ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶ ಇಲ್ಲ. ಆದರೆ ಸಚಿವ ಡಿಕೆಶಿವಕುಮಾರ್ ವಿರುದ್ಧ ಅವರು ಮಾಡಿದ್ದೇನು? ಕಾನೂನಿನ ಮುಂದೆ ಎಲ್ಲರೂ ಒಂದೇ ಎಂದು ತಿರುಗೇಟು ನೀಡಿದರು.
- Advertisement 3
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ರಾಹುಲ್ ಗಾಂಧಿ ಅವರ ಜೊತೆ ಸಮಾಲೋಚನೆ ನಡೆಸಲಿದ್ದೇನೆ ಎಂದು ಹೇಳಿದರು.
- Advertisement 4
ಗರಿಷ್ಠ ಮಟ್ಟ ತಲುಪಿರುವ ಆಲಮಟ್ಟಿ ಅಣೆಕಟ್ಟೆ ಹಾಗೂ ತುಂಬಿ ಹರಿಯುತ್ತಿರುವ ನಾಡಿನ ಜೀವನದಿಗಳಲ್ಲಿ ಒಂದಾದ ಕೃಷ್ಣೆಗೆ ಇಂದು ಗಂಗೆ ಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದೆ pic.twitter.com/VTHEze896y
— CM of Karnataka (@CMofKarnataka) August 18, 2017