ಚಾಮರಾಜನಗರ: ಗಂಡ್ಲುಪೇಟೆಯಲ್ಲಿ ಚುನಾವಣಾ ಭಾಷಣದ ವೇಳೆ ಪ್ರಧಾನಿ ಮೋದಿಯನ್ನ ಹುಚ್ಚನಿಗೆ ಹೋಲಿಸಿದ್ದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹಿಂ ವಿರುದ್ಧ ದೂರು ದಾಖಲಾಗಿದೆ.
ಬಿಜೆಪಿ ಯುವ ಮುಖಂಡ ಪ್ರಣಯ್ ಎಂಬವರು ಇಬ್ರಾಹಿಂ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗುಂಡ್ಲುಪೇಟೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಇದನ್ನೂ ಓದಿ: ಮೋದಿಗೆ ಅಧಿಕಾರ ಕೊಟ್ಟಿರೋದು ಹುಚ್ಚನ ಕೈಗೆ ಶೇವಿಂಗ್ ಕತ್ತಿ ಕೊಟ್ಟಂಗಾಗಿದೆ: ಸಿಎಂ ಇಬ್ರಾಹಿಂ ಲೇವಡಿ
ಇಬ್ರಾಹಿಂ ಏನು ಹೇಳಿದ್ದರು?: ಭಾನುವಾರ ಗುಂಡ್ಲುಪೇಟೆಯಲ್ಲಿ ನಡೆದ ಉಪಚುನಾವಣೆಯ ವೇಳೆ, ಪ್ರಧಾನಿ ನರೇಂದ್ರ ಮೋದಿಯವರಿಗೆ ಅಧಿಕಾರ ಕೊಟ್ಟಿರೋದು ಹುಚ್ಚನ ಕೈಯಲ್ಲಿ ಕತ್ತಿ ಕೊಟ್ಟು ಶೇವಿಂಗ್ ಕೂತಂಗೆ ಆಗಿದೆ. ಮೋದಿ ಕತ್ತಿಯನ್ನು ಕುತ್ತಿಗೆಗೆ ಹಿಡಿತಾನೋ ಅಥವಾ ಗಡ್ಡಕ್ಕೆ ಹಿಡಿಯುತ್ತಾನೋ ಅಂತಾನೇ ಗೊತ್ತಾಗ್ತಾ ಇಲ್ಲ ಅಂತಾ ರಾಜ್ಯ ಯೋಜನಾ ಆಯೋಗದ ಅಧ್ಯಕ್ಷ ಸಿಎಂ ಇಬ್ರಾಹಿಂ ಲೇವಡಿ ಮಾಡಿದ್ದರು.