ಕೊಪ್ಪಳ: ಕರ್ತವ್ಯ ನಿರತ ಪೊಲೀಸ್ ಪೇದೆಯೊಬ್ಬರಿಗೆ ಹೃದಯಾಘಾತವಾಗಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಕೊಪ್ಪಳದ ಡಿ.ಆರ್ ಪೊಲೀಸ್ ಪೇದೆಯಾಗಿದ್ದ 40 ವರ್ಷದ ಧರ್ಮಣ್ಣ ಪೂಜಾರ್ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇಂದು ಎಂದಿನಂತೆ ಬೆಳಗಿನ ಜಾವ ಕರ್ತವ್ಯದಲ್ಲಿದ್ದಾಗ ಧರ್ಮಣ್ಣ ಅವರಿಗೆ ಹೃದಯಾಘಾತವಾಗಿತ್ತು. ತಕ್ಷಣ ಸಹಚರ ಪೊಲೀಸ್ ಪೇದೆಗಳು ಅವರನ್ನು ಸಮೀಪದ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ಅಸುನೀಗಿದ್ದಾರೆ.
ಮೃತ ಧರ್ಮಣ್ಣ ಅವರು ಹೈವೇ ಪೆಟ್ರೋಲಿಂಗ್ ವಾಹನದ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು.