ಚಿಕ್ಕಮಗಳೂರು: ದೇವರಲ್ಲಿ (God) ಒಳ್ಳೆ ಬುದ್ಧಿ, ವಿದ್ಯೆ, ಜ್ಞಾನ, ಸುಖ, ಶಾಂತಿ, ನೆಮ್ಮದಿ, ಅಂತಸ್ತು, ಆರೋಗ್ಯ ಕೊಡಪ್ಪಾ ಅಂತ ಕೇಳಿಕೊಳ್ತಾರೆ. ಆದರೆ, ಭಕ್ತನೋರ್ವ (Devotee) ಸಂಬಳ ತಂದು ನನ್ನ ಕೈಗೆ ಕೊಡು, ಹುಡುಗಿನ ದಪ್ಪ ಮಾಡು, ಮದುವೆನ (Marriage) ಫಿಕ್ಸ್ ಮಾಡು ಅಂತ ಪತ್ರ (Letter) ಬರೆದು ಕಾಣಿಕೆ ಹುಂಡಿಯಲ್ಲಿ ಹಾಕಿರುವ ಘಟನೆ ಜಿಲ್ಲೆಯ ಕಳಸ ತಾಲೂಕಿನಲ್ಲಿ ನಡೆದಿದೆ.
ಕಳಸ ತಾಲೂಕಿನ ಇತಿಹಾಸ ಪ್ರಸಿದ್ಧ ಕಳಸೇಶ್ವರ ಸ್ವಾಮಿ ದೇಗುಲದ (Kalaseshwara Temple Kalasa) ಕಾಣಿಕೆ ಹುಂಡಿ ಎಣಿಕೆ ಕಾರ್ಯ ನಡೆಯಿತು. ಹುಂಡಿಯಲ್ಲಿ ಸುಮಾರು 18 ಲಕ್ಷಕ್ಕೂ ಅಧಿಕ ಹಣ ಸಂಗ್ರಹವಾಗಿತ್ತು. ಆದರೆ, ಹಣದ ಜೊತೆ ಭಕ್ತನೋರ್ವ ದೇವರಿಗೆ ಬರೆದ ಪತ್ರ ಕಂಡು ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಹಾಗೂ ಅಧಿಕಾರಿಗಳು ನಸು ನಕ್ಕಿದ್ದಾರೆ. ಪತ್ರದಲ್ಲಿ ಹತ್ತಾರು ವಿಷಯಗಳ ಬಗ್ಗೆ ನೋವು ತೋಡಿಕೊಂಡಿರುವ ಭಕ್ತ ಸಂಬಳ ತಂದು ಇಂತವರಿಗೆ ಕೊಡಲಿ, ಹುಡುಗಿಯನ್ನು ದಪ್ಪ ಮಾಡಿ ಪುಷ್ಠಿಯಾಗಿ ಕಾಣುವಂತೆ ಮಾಡು, ಯಾವುದೇ ವಿಘ್ನವಿಲ್ಲದೆ ಮದುವೆ ಮಾಡಿಸು ಎಂದು ಬರೆದಿರೋದು ನಗೆಪಾಟಲಿಗೀಡಾಗಿದೆ. ಇದನ್ನೂ ಓದಿ: ಮಕ್ಕಳ ಅಶ್ಲೀಲ ಚಿತ್ರದ ವಿರುದ್ಧ ಕರ್ನಾಟಕ ಸೇರಿದಂತೆ ದೇಶಾದ್ಯಂತ 56 ಸ್ಥಳಗಳಲ್ಲಿ ಸಿಬಿಐ ದಾಳಿ
ಪತ್ರದಲ್ಲಿ ಮಂಜುಳ ಅತ್ತೆ-ಮಾವನ ಜೊತೆ ಪ್ರೀತಿಯಿಂದ ಇರುವಂತೆ ಮಾಡು. ಮಂಜುಳ ಮನಸ್ಸಿನಲ್ಲಿ ರಾಜಮ್ಮ, ಬಸವರಾಜುನನ್ನು ಒಳ್ಳೆಯವರಾಗಿಸು. ದೇವರಾಜುಗೆ ಕೈತುಂಬಾ ಸಂಬಳ ಸಿಗುವ ಸರ್ಕಾರಿ ಕೆಲಸ ಕೊಡಿಸು. ನಮ್ಮ ಋಣದ ಬಾಧೆ ಹಾಗೂ ಸಾಲದ ಭಾದೆಯನ್ನು ಬೇಗ ತೀರಿಸು, ರಮೇಶ-ಮಂಜುಳ ಒಪ್ಪಿಕೊಂಡಿರುವ ಒಂದು ಲಕ್ಷ ರೂಪಾಯಿ ಹಣವನ್ನು ಬೇಗ ಕೊಡುವಂತೆ ಮಾಡು. ರಾಮಕೃಷ್ಣ-ಅರುಣ ಇಬ್ಬರೂ ಹಣವನ್ನು ಬೇಗ ಕೊಡುವಂತೆ ಮಾಡು ಎಂದೆಲ್ಲಾ ಕೇಳಿಕೊಂಡಿದ್ದಾರೆ. ಈ ಭಕ್ತನ ಸಮಸ್ಯೆಗಳ ಪಟ್ಟಿಗೆ ಅಧಿಕಾರಿಗಳು ಶಾಕ್ ಆಗಿದ್ದಾರೆ. ಈ ದೇವಾಲಯದಲ್ಲಿ ಈ ರೀತಿಯ ಪತ್ರ ಇದೇ ಮೊದಲಲ್ಲ. ಕಳೆದ ಒಂದೆರಡು ವರ್ಷಗಳ ಹಿಂದೆಯೂ ಇದೇ ರೀತಿ ಪತ್ರ ಪತ್ತೆಯಾಗಿತ್ತು. ಆಗಲೂ ಕೂಡ ಭಕ್ತನೋರ್ವ ಪ್ರೀತಿ-ಪ್ರೇಮ, ಹಣ-ಕೆಲಸದ ಬಗ್ಗೆಯೇ ಪತ್ರ ಬರೆದಿದ್ದನು. ಇದೀಗ ಮತ್ತೊಮ್ಮೆ ಇದೇ ರೀತಿಯ ಪ್ರಸಂಗ ನಡೆದಿದೆ. ಇದನ್ನೂ ಓದಿ: ಇರಾನ್ನಲ್ಲಿ ಹಿಜಬ್ ಹೋರಾಟ – 60 ಮಹಿಳೆಯರು ಸೇರಿ 700ಕ್ಕೂ ಹೆಚ್ಚು ಮಂದಿ ಅರೆಸ್ಟ್