ಅನೇಕಲ್: ಕುಡಿದ ಮತ್ತಿನಲ್ಲಿ ಸಹೋದರರ ನಡುವೆ ಜಗಳ ನಡೆದು ಅಣ್ಣ ತಮ್ಮನ ಮೇಲೆ ಗುಂಡಿನ ದಾಳಿ ನಡೆಸಿದ ಪರಿಣಾಮ ತಮ್ಮ ಸ್ಥಳದಲ್ಲೇ ಸಾವನಪ್ಪಿದ ಘಟನೆ ಆನೇಕಲ್ ಗಡಿಗೆ ಹೊಂದಿಕೊಂಡಿರೋ ತಮಿಳುನಾಡಿನ ದೇವರಬೆಟ್ಟ ಗ್ರಾಮದಲ್ಲಿ ನಡೆದಿದೆ.
- Advertisement 2
ದೇವರಬೆಟ್ಟ ಗ್ರಾಮದ ಗಣೇಶ್(32) ಅಣ್ಣ ಶಂಕರಪ್ಪನಿಂದ ಕೊಲೆಯಾದ ದುರ್ದೈವಿ. ಗಣೇಶ ಅನೇಕಲ್ ಸುತ್ತಮುತ್ತ ಕೂಲಿ ಕೆಲಸ ಮಾಡಿಕೊಂಡಿದ್ದು ಹಬ್ಬದ ಪ್ರಯುಕ್ತ ನಿನ್ನೆ ಸ್ವಗ್ರಾಮ ದೇವರಬೆಟ್ಟಕ್ಕೆ ತೆರಳಿದ್ದ. ಅಣ್ಣ, ತಮ್ಮ ಇಬ್ಬರು ಒಟ್ಟಿಗೆ ಸೇರಿ ಮದ್ಯಪಾನ ಪಾರ್ಟಿ ನಡೆಸಿದ್ದಾರೆ. ಈ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಜಗಳ ವಿಕೋಪಕ್ಕೆ ತಿರುಗಿ ಶಂಕರಪ್ಪ ಮನೆಯಲ್ಲಿದ್ದ ಡಬ್ಬಲ್ ಬ್ಯಾರಲ್ ಗನ್ ನಿಂದ ತಮ್ಮನ ಮೇಲೆ ಗುಂಡು ಹರಿಸಿದ್ದಾನೆ. ಗುಂಡೇಟು ತಿಂದ ಗಣೇಶ್ ಸ್ಥಳದಲ್ಲೇ ಸಾವನಪ್ಪಿದ್ದಾನೆ.
- Advertisement 3
ಪ್ರಕರಣ ದಾಖಲಿಸಿಕೊಂಡ ತಮಿಳುನಾಡಿನ ಥಳಿ ಪೊಲೀಸರು ಆರೋಪಿ ಶಂಕರಪ್ಪನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.