ಶಿವಮೊಗ್ಗ: ಜಿಲ್ಲೆಯ ಸಾಗರದಲ್ಲಿ ನಡೆಯುತ್ತಿರುವ ಮಾರಿಕಾಂಬೆ ಜಾತ್ರೆಯಲ್ಲಿ ಲೂಸ್ ಮಾದ ಯೋಗೀಶ್ ಅಭಿನಯದ ದುನಿಯಾ 2 ಚಿತ್ರದ ಆಡಿಯೋ ಹಾಗೂ ಟ್ರೇಲರ್ ಬಿಡುಗಡೆ ಮಾಡಲಾಯಿತು.
ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಆಡಿಯೋ ಬಿಡುಗಡೆ ಮಾಡಿ, ಚಿತ್ರ ಶತದಿನ ಪ್ರದರ್ಶನ ಕಾಣಲಿ ಅಂತಾ ಹೇಳಿದ್ರು.
10 ವರ್ಷಗಳ ಹಿಂದೆ ದುನಿಯಾ ಚಿತ್ರದಲ್ಲಿ ಪುಟ್ಟ ಪಾತ್ರ ಮಾಡುವ ಮೂಲಕ ಚಿತ್ರರಂಗಕ್ಕೆ ಬಂದಿದ್ದೆ. ಇದೀಗ ದುನಿಯಾ 2 ಚಿತ್ರದಲ್ಲಿ ನಾಯಕನಾಗಿ ಮತ್ತೆ ಅಭಿನಯಿಸಿದ್ದೇನೆ. ಸಾಗರ ಮಾರಿಕಾಂಬೆ ಜಾತ್ರೆಯಲ್ಲಿ ಆಡಿಯೋ ಬಿಡುಗಡೆ ಮಾಡುತ್ತಿರುವುದು ಖುಷಿ ಕೊಟ್ಟಿದೆ. ಈ ಸಿನೆಮಾವನ್ನೂ ಗೆಲ್ಲಿಸಿ ಅಂತಾ ಯೋಗೀಶ್ ಹೇಳಿದ್ರು.
ಬಳಿಕ ಅಭಿಮಾನಿಗಳ ಆಗ್ರಹದ ಮೇರೆಗೆ ಹುಡುಗರು ಹಾಗೂ ಸಿದ್ಲಿಂಗು ಚಿತ್ರದ ಡೈಲಾಗ್ ಹೇಳಿ ರಂಜಿಸಿದರು. ಚಿತ್ರದ ಸಂಗೀತ ನಿರ್ದೇಶಕ ಭರತ್, ನಿರ್ದೇಶಕ ಹರಿ, ನಿರ್ಮಾಪಕರಾದ ಸಿದ್ದರಾಜು, ಶೃತಿ ವೆಂಕಟೇಶ್ ಇನ್ನಿತರರು ಇದ್ದರು.