ಮೈಸೂರು: ರಸ್ತೆ ಅಪಘಾತದಲ್ಲಿ ಮಾಜಿ ಸಂಸದ ಅಡಗೂರು ಎಚ್.ವಿಶ್ವನಾಥ್ ಪುತ್ರ ಅಪಾಯದಿಂದ ಪಾರಾಗಿದ್ದಾರೆ.
ಮಂಗಳವಾರ ತಡರಾತ್ರಿ ಕಾರ್ ಕಾಗೂ ಆಟೋ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಮಾಜಿ ಸಂಸದರ ಪುತ್ರ ಪೂರ್ವಜ್ ವಿಶ್ವನಾಥ್ ಅಪಾಯದಿಂದ ಪಾರಾಗಿದ್ದಾರೆ. ಈ ಘಟನೆ ಕೆ.ಆರ್.ನಗರ ಪಟ್ಟಣ ಹೊರವಲಯದ ಬಸವೇಶ್ವರ ದೇವಾಲಯ ಬಳಿ ಸಂಭವಿಸಿದೆ.
ಕಾರ್ಯನಿಮಿತ್ತ ಚಾಂದಗಾಲು ಗ್ರಾಮಕ್ಕೆ ಪೂರ್ವಜ್ ತಮ್ಮ ಕಾರಿನಲ್ಲಿ ಹೊರಟಿದ್ದ ವೇಳೆ ಆಲೂಗಡ್ಡೆ ತುಂಬಿದ್ದ ಗೂಡ್ಸ್ ಆಟೋಗೆ ಡಿಕ್ಕಿ ಹೊಡೆದಿದೆ. ಘಟನೆಯಿಂದ ಎರಡೂ ವಾಹನಗಳು ಸಂಪೂರ್ಣ ಜಖಂ ಆಗಿದೆ. ಅರಕಲಗೂಡು ಮಂಜುನಾಥ್ ಎಂಬವರಿಗೆ ಸೇರಿದ ಆಟೋ ಇದಾಗಿದೆ. ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿದ್ದು, ಸದ್ಯ ಗಾಯಾಳುಗಳು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಬಗ್ಗೆ ಕೆಆರ್ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
https://www.youtube.com/watch?v=LH0pNdW7o3U