ಮಂಡ್ಯ: ತಂದೆಯಿಂದಲೇ ಹೆಣ್ಣು ಮಗು ಮಾರಾಟಕ್ಕೆ ಯತ್ನ ನಡೆದಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆದಿದೆ.
ಬೆಂಗಳೂರು ಮೂಲದ ವಿನೋದ್ ಎಂಬಾತ ತನ್ನ ಹೆಣ್ಣು ಮಗು ಅಂಜಲಿ (3)ಯನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಅಂತ ಶಂಕೆ ವ್ಯಕ್ತಪಡಿಸಲಾಗಿದೆ.
ಅಲ್ಲಿಯ ಸ್ಥಳಿಯರು ಹೆಣ್ಣು ಮಗುವನ್ನು ರಕ್ಷಣೆ ಮಾಡಿದ್ದಾರೆ. ವಿಚಾರ ತಿಳಿದು ಕೂಡಲೇ ಪೊಲೀಸ್ ಆಗಮಿಸಿ ತಂದೆ ಮಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸವಿತಾ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.