ಚಾಮರಾಜನಗರ: ತಾಲೂಕಿನ ಬಸವರಾಜಪುರ ಗ್ರಾಮದಲ್ಲಿರೋ ದನದ ಕೊಟ್ಟಿಗೆಯೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಮೂರು ಹಸುಗಳು ಸಜೀವ ದಹನಗೊಂಡಿರುವ ಘಟನೆ ನಡೆದಿದೆ.
- Advertisement 2
ಗ್ರಾಮದ ಬಸವದೇವರು ಎಂಬವರಿಗೆ ಸೇರಿದ ಹಸುಗಳು ಬೆಂಕಿಗಾಹುತಿಯಾಗಿವೆ. ಭಾನುವಾರ ರಾತ್ರಿ ಬೆಂಕಿ ತಗುಲಿದ್ದು, ಹಸುಗಳು ಬೆಂಕಿಯ ತೀವ್ರತೆಗೆ ಸುಟ್ಟು ಕರಕಲಾಗಿವೆ. ಕೊಟ್ಟಿಗೆಯ ಪಕ್ಕದಲ್ಲಿದ್ದ ಮೇವಿಗೂ ಬೆಂಕಿ ತಗುಲಿದ್ದರಿಂದ ತಕ್ಷಣವೇ ಬೆಂಕಿ ಆವರಿಸಿಕೊಂಡಿದೆ ಎಂದು ಹೇಳಲಾಗಿದೆ.
- Advertisement 3
- Advertisement 4
ಬೇಸಿಗೆ ಮತ್ತು ಬರದಿಂದಾಗಿ ಮೇವಿಗೆ ಅಭಾವ ಇರುವುದರಿಂದ ಕೊಟ್ಟಿಗೆಯಲ್ಲೇ ಮೇವನ್ನು ದಾಸ್ತಾನು ಮಾಡಲಾಗಿತ್ತು. ಒಂದು ಲಕ್ಷಕ್ಕೂ ಅಧಿಕ ಬೆಲೆಬಾಳುವ ಹಸುಗಳನ್ನು ಕಳೆದುಕೊಂಡಿರುವ ರೈತ ಬಸವದೇವರು ಕಂಗಾಲಾಗಿದ್ದಾರೆ. ಈ ಸಂಬಂಧ ಆಲೂರುಒಮ್ಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.