ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಮೂರು ಅಂತಸ್ತಿನ ಕಟ್ಟಡವೊಂದು ಕುಸಿದು ಐವರು ಗಾಯಗೊಂಡ ಘಟನೆ ನಡೆದಿದೆ.
ಈ ಘಟನೆ ಇಂದು ನಸುಕಿನ ಜಾವ 1.30ರ ಸುಮಾರಿಗೆ ಲಕ್ಷ್ಮೀನಗರದಲ್ಲಿ ನಡೆದಿದೆ. ಅವಘಡ ಸಂಭವಿಸುತ್ತಿದ್ದಂತೆಯೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯ ನಡೆಸಿದ್ದಾರೆ. ಘಟನೆಯಿಂದ 5 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಅಂತಾ ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.
ಈ ಕಟ್ಟಡ ಕುಸಿಯುವ ಸ್ಥಿತಿಯಲ್ಲಿದ್ದಿದ್ದು, ಈ ಹಿಂದೆಯೇ ಸಾರ್ವಜನಿಕರು ದೆಹಲಿ ಮಹಾನಗರ ಪಾಲಿಕೆಗೆ ಮಾಹಿತಿ ನೀಡಿದ್ದರು. ಆದ್ರೆ ಪಾಲಿಕೆ ಸಿಬ್ಬಂದಿಗಳು ಮಾತ್ರ ಯಾವುದೇ ಕ್ರಮ ಕೈಕೊಂಡಿಲ್ಲ ಅಂತಾ ಆರೋಪಿಸಲಾಗಿದೆ.
ಘಟನೆಯಲ್ಲಿ ಸಣ್ಣ ಪುಟ್ಟ ಗಾಯಗೊಂಡಿವರಿಗೆ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ಯಾರನ್ನೂ ಆಸ್ಪತ್ರೆಗೆ ದಾಖಲಿಸಲಾಗಿಲ್ಲ. ಅಲ್ಲದೇ ಯಾವುದೇ ಕುಟುಂಬ ಕಟ್ಟಡದ ಅವಶೇಷಗಳಡಿ ಸಿಲುಕಿಲ್ಲ. ಎಲ್ಲರನ್ನೂ ಅಪಾಯದಿಂದ ರಕ್ಷಿಸಲಾಗಿದೆ ಅಂತಾ ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.