ಮಡಿಕೇರಿ: ಅರಣ್ಯ ವೀಕ್ಷಣೆ ಮಾಡಲು ಹೋದ ಸಂದರ್ಭ ಕಾಲು ಜಾರಿ ನೀರಿಗೆ ಬಿದ್ದು ಅರಣ್ಯ ವೀಕ್ಷಕ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ತೊಡಿಕಾನ(Thodikana) ಅರಣ್ಯ ಪ್ರದೇಶದಲ್ಲಿ ನಡದಿದೆ.
ಭಾಗಮಂಡಲ(Bhagamandala) ಅರಣ್ಯ ವ್ಯಾಪ್ತಿಯ ತೊಡಿಕಾನದ ಸಿಪಿಟಿ 76ರಲ್ಲಿ ಘಟನೆ ನಡೆದಿದ್ದು, ಅರಣ್ಯ ವೀಕ್ಷಕ ಚಿನ್ನಪ್ಪ ಎಂ ಹೆಚ್ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಇದನ್ನೂ ಓದಿ: ಸರ್ಕಾರಿ ನೌಕರರರಿಗೆ ಸಿಹಿ ಸುದ್ದಿ – 7ನೇ ವೇತನ ಆಯೋಗ ಜಾರಿ
ಮಂಗಳವಾರ ಸಂಜೆ ಅರಣ್ಯದಲ್ಲಿ ಬೀಟ್ಗೆ ಹೋದ ಸಂದರ್ಭದಲ್ಲಿ ನೀರು ಕುಡಿಯಲು ಜಲಪಾತದ ಕಡೆ ಹೋಗಿದ್ದಾರೆ. ಈ ವೇಳೆ ಕಾಲು ಜಾರಿ ಝರಿಯ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ.
ಇಂದು ಅರಣ್ಯ ಇಲಾಖೆಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹ ಪತ್ತೆ ಮಾಡಿದ್ದಾರೆ. ಘಟನೆ ಸಂಬಂಧಿಸಿದಂತೆ ಭಾಗಮಂಡಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.