ಮಂಗಳೂರು: ಗ್ಯಾಸ್ ಟ್ಯಾಂಕರ್ ನಿಂದ ಇದ್ದಕ್ಕಿದ್ದಂತೆ ಗ್ಯಾಸ್ ಲೀಕ್ ಆದ ಘಟನೆ ಶುಕ್ರವಾರ ಮಧ್ಯಾಹ್ನ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಮಡಂತ್ಯಾರು ಬಳಿ ನಡೆದಿದೆ.
ಟ್ಯಾಂಕರ್ ನ ಮೇಲ್ಭಾಗದಿಂದ ಗ್ಯಾಸ್ ಸೋರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸ್ಥಳಕ್ಕೆ ಅಗ್ನಿ ಶಾಮಕದಳದ ಅಧಿಕಾರಿಗಳು ದೌಡಾಯಿಸಿದ್ದು ನೀರು ಹಾರಿಸಿ ಅಗ್ನಿ ಅವಘಡವಾಗದಂತೆ ತಡೆದಿದ್ದಾರೆ. ಮುಂಜಾಗೃತಾ ಕ್ರಮವಾಗಿ ಮಂಗಳೂರು ಚಾರ್ಮಾಡಿ ನಡುವಿನ ಸಂಚಾರ ಸ್ಥಗಿತಗೊಳಿಸಲಾಗಿದೆ.
ಒಂದು ಕಿಲೋ ಮೀಟರ್ ದೂರದವರೆಗೆ ವಾಹನಗಳು ಸಾಲುಗಟ್ಟಿ ನಿಂತಿದ್ದು, ಸ್ಥಳೀಯ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಶಿರಾಡಿ ಘಾಟ್ ದುರಸ್ತಿಯ ಹಿನ್ನಲೆಯಲ್ಲಿ ಹೆಚ್ಚಿನ ವಾಹನಗಳು ಚಾರ್ಮಾಡಿ ಮೂಲಕವೇ ಮಂಗಳೂರು ಬೆಂಗಳೂರಿಗೆ ಸಂಚರಿಸುತ್ತಿವೆ.