ವಿಜಯಪುರ: ವೈದ್ಯನ ಎಡವಟ್ಟಿನಿಂದ ಬಾಲಕಿ ಸಾನ್ನಪ್ಪಿರುವ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಆಲಮೇಲ ಪಟ್ಟಣದಲ್ಲಿ ನಡೆದಿದೆ.
8 ವರ್ಷದ ರೂಪಾ ರಾಮಣ್ಣ ಬಂಡಿವಡ್ಡರ ಮೃತಪಟ್ಟಿರುವ ಬಾಲಕಿ. ಅಲಮೇಲ ಪಟ್ಟಣದ ನಿವಾಸಿ ರಾಮು ಬಂಡಿವಡ್ಡರ ಎಂಬವರು ಮಗಳು. ಮೂರು ದಿನಗಳ ಹಿಂದೆ ಜ್ವರದಿಂದ ಬಳಲುತ್ತಿದ್ದಳು.
ತೀವ್ರ ಜ್ವರದಿಂದ ಬಳಲುತ್ತಿದ್ದ ತಮ್ಮ ಮಗಳು ರೂಪಾಳನ್ನು ಪೋಷಕರು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ವೈದ್ಯ ಚಂದ್ರಶೇಖರ ರೂಪಾಗೆ ಚುಚ್ಚುಮದ್ದು ನೀಡಿದ್ದಾನೆ. ಆದರೆ ಚುಚ್ಚುಮದ್ದು ವ್ಯತಿರಿಕ್ತ ಪರಿಣಾಮ ಬೀರಿ ಬಾಲಕಿ ರೂಪಾ ಇಂದು ಸಾವನ್ನಪ್ಪಿದ್ದಾಳೆ. ರೂಪಾಳನ್ನು ಕಳೆದುಕೊಂಡ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.
ಈ ಹಿನ್ನೆಲೆಯಲ್ಲಿ ಆಲಮೇಲ ಪೊಲೀಸ್ ಠಾಣೆಯಲ್ಲಿ ವೈದ್ಯನ ವಿರುದ್ಧ ದೂರು ನೀಡಲಾಗಿದೆ. ಆದರೆ ಎಡವಟ್ಟು ಮಾಡಿದ ವೈದ್ಯ ಪರಾರಿಯಾಗಿದ್ದಾನೆ.
ಇದನ್ನು ಓದಿ: ವೈದ್ಯರ ನಿರ್ಲಕ್ಷ್ಯಕ್ಕೆ ರಾತ್ರಿ ಮತ್ತೊಂದು ಮಗು ಸಾವು – ರಾಜ್ಯದಲ್ಲಿ ಸಾವಿನ ಸಂಖ್ಯೆ 33ಕ್ಕೆ ಏರಿಕೆ