ಚಾಮರಾಜನಗರ: ಅರಣ್ಯದಲ್ಲಿರುವ ದೇವಸ್ಥಾನಕ್ಕೆ ಸಾರ್ವಜನಿಕರಿಗೆ ನಿರ್ಬಂಧ ಹೇರಿದ್ದಕ್ಕೆ ಅರಣ್ಯ ಅಧಿಕಾರಿಗಳು ಮತ್ತು ಸಾರ್ಜನಿಕರ ಮಧ್ಯೆ ತಳ್ಳಾಟ ನೂಕಾಟ ನಡೆದ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ನಡೆದಿದೆ.
ಗುಂಡ್ಲುಪೇಟೆ ತಾಲೂಕಿನ ಮದ್ದೂರು ಅರಣ್ಯ ಚೆಕ್ ಪೋಸ್ಟ್ ನಲ್ಲಿ ಈ ಘಟನೆ ನಡೆದಿದ್ದು, ಸುಮಾರು ಎರಡು ಗಂಟೆಗಳ ಕಾಲ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಾರ್ವಜನಿಕರ ನಡುವೆ ಮಾತಿನ ಚಕಮಕಿ ನಡೆದಿದೆ.
- Advertisement 2
ಸೋಮವಾರದಂದು ಅರಣ್ಯದ ಅಕ್ಕ ಪಕ್ಕದ ಹೊಂಗಳ್ಳಿ, ಹಳ್ಳದ ಮಾದಳ್ಳಿ ಹಾಗೂ ಅಕ್ಕನಪುರದ ಗ್ರಾಮಸ್ಥರು ಕಾಡಿನೊಳಗೆ ಇರುವ ದೇವಸ್ಥಾನದಲ್ಲಿ ಜಾತ್ರೆ ನಡೆಸಲು ಮುಂದಾಗಿದ್ದರು. ಆದರೆ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಬಂಡಿಪುರ ರಾಷ್ಟ್ರೀಯ ಉದ್ಯಾನವನದ ಕಲ್ಕೆರೆ ಅರಣ್ಯ ವ್ಯಾಪ್ತಿಯಲ್ಲಿರುವ ಐನೋರಾ ಮಾರಿಗುಡಿ ದೇವಸ್ಥಾನಕ್ಕೆ ಸಾರ್ವಜನಿಕರ ಪ್ರವೇಶವನ್ನು ಅರಣ್ಯ ಅಧಿಕಾರಿಗಳು ನಿರ್ಬಂಧಿಸಿದ್ದರು.
- Advertisement 3
- Advertisement 4
ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಸುಮಾರು ಒಂದುವರೆ ಸಾವಿರ ಮಂದಿ ಅರಣ್ಯಾಧಿಕರಿಗಳ ಜೊತೆ ಮಾತಿನ ಚಕಮಕಿ ನಡೆಸಿದ್ದರು. ಅಲ್ಲದೇ ಚೆಕ್ ಪೋಸ್ಟ್ ನ್ನು ಮುರಿದು ಆಕ್ರೋಶ ವ್ಯಕ್ತಪಡಿಸಿದ್ದರು.
ಈ ವೇಳೆ ಅಧಿಕಾರಿಗಳು ಹಾಗೂ ಸಾರ್ವಜನಿಕರ ನಡುವೆ ತಳ್ಳಾಟ ನೂಕಾಟ ಜರುಗಿತು. ಇದರಿಂದ ಕರ್ನಾಟಕ ಹಾಗೂ ಕೇರಳ ಸಂಚಾರ ಸುಮಾರು ಎರಡು ಗಂಟೆಗಳ ಕಾಲ ಅಸ್ತವ್ಯಸ್ತಗೊಂಡಿತ್ತು.
https://youtu.be/iBVBJcf47Ig