ವಿಜಯಪುರ: ಕಸಾಯಿಖಾನೆಗಳಿಗೆ ಗೋವುಗಳ ಮಾರಾಟವನ್ನು ಕೆಂದ್ರ ಸರ್ಕಾರ ನಿಷೇಧ ಮಾಡಿದ್ದು, ಇದಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ವಿಜಯಪುರದಲ್ಲಿ ಸಂತೋಷ ವ್ಯಕ್ತಪಡಿಸಿದ್ದಾರೆ. ಆದ್ರೆ ಇದರಿಂದ ರೈತರಿಗೆ ಹೊರೆಯಾಗಲಿದೆ ಅಂತಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರಕ್ಕೆ ನಿಜವಾಗ್ಲೂ ಗೋ ರಕ್ಷಣೆ ಮಾಡುವ ಉದ್ದೇಶ ಇದ್ದಿದ್ದೇ ಆದರೆ, ಗೋ ಕೇಂದ್ರಗಳನ್ನು ತಗೆದು ರೈತರಿಗೆ ಸಲಹಲು ಆಗದ ಗೋವುಳನ್ನು ಸರ್ಕಾರ ಪಾಲನೆ ಮಾಡುವ ನಿಟ್ಟಿನಲ್ಲಿ ಕ್ರಮ ತಗೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಕರ್ನಾಟಕದ ಬಸ್ ಗಳ ಮೇಲೆ ಮಹಾರಾಷ್ಟ್ರದಲ್ಲಿ ಶಿವಸೇನೆ ನಡೆಸುತ್ತಿರುವ ಪುಂಡಾಟಿಕೆ ತಡೆಯುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಅಲ್ಲದೆ ಇದರಿಂದ ದಿನನಿತ್ಯ ಬಸ್ ನಲ್ಲಿ ಪ್ರಯಾಣಿಸುವವರು ಆತಂಕ ಪಡುವಂತಾಗಿದೆ. ಈ ಸಮಸ್ಯೆಯನ್ನು ಗನ್ ಹಿಡಿದು ಬಗೆಹರಿಸಲು ಸಾಧ್ಯವಿಲ್ಲ. ಸೌಹಾರ್ದಯುತವಾದ ಮಾತುಕತೆ ಮೂಲಕ ಬಗೆಹರಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಸಲಹೆಯಿತ್ತರು.
ಯಡ್ಡಿಯೂರಪ್ಪ ಪಕ್ಷದಲ್ಲಿ ಬರ ಬಂದಿದ್ದಕ್ಕೆ ಬರ ಪ್ರವಾಸ ಮಾಡುತ್ತಿದ್ದಾರೋ ಅಥವಾ ನಿಜವಾಗಲೂ ರೈತರಿಗಾಗಿ ಬರ ಪ್ರವಾಸ ಮಾಡುತ್ತಿದ್ದಾರೋ ಎಂದು ಜನರಿಗೆ ಸ್ಪಷ್ಟಪಡಿಸಬೇಕೆಂದು ಎಚ್ಡಿಕೆ ಅಗ್ರಹಿಸಿದರು.