ಬೆಂಗಳೂರು: ಸ್ಯಾಂಡಲ್ವುಡ್ ನಟಿ ಅಮೂಲ್ಯ ಮದುವೆಗೆ ಎಲ್ಲಾ ಸಿದ್ಧತೆ ನಡೆಯುತ್ತಿದೆ. ಉದ್ಯಮಿ ಜಗದೀಶ್ ಆರ್ ಚಂದ್ರ ಅವರ ಜೊತೆ ಸಪ್ತಪದಿ ತುಳಿಯೋಕೆ ಚೆಲುವಿನ ಚಿತ್ತಾರದ ಬೆಡಗಿ ರೆಡಿಯಾಗಿದ್ದಾರೆ.
ಇದನ್ನೂ ಓದಿ: ಮದುವೆಯಾದ ಬಳಿಕ ಚಿತ್ರದಲ್ಲಿ ನಟನೆ ಮಾಡ್ತೀರಾ: ಅಮೂಲ್ಯ ಉತ್ತರ ಇದು
ಮೇ 12 ರಂದು ಮಂಡ್ಯ ಜಿಲ್ಲೆಯ ಆದಿ ಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಮದುವೆ ನಡೆಯಲಿದೆ. ಕುಟುಂಬಸ್ಥುರು ಹಾಗೂ ತೀರಾ ಆಪ್ತರಿಗಷ್ಟೇ ಮದುವೆಗೆ ಆಹ್ವಾನಿಸಲಾಗಿದ್ದು ಇದೀಗ ವಿವಾಹದ ಆಮಂತ್ರಣ ಪತ್ರಿಕೆ ರೆಡಿಯಾಗಿದೆ. ಈ ಆಮಂತ್ರಣ ಪತ್ರಿಕೆಯನ್ನ ಈಗಾಗ್ಲೇ ಜಗದೀಶ್ ಕುಟುಂಬ ತಮ್ಮ ಆಪ್ತರಿಗೆ ಬಂದು ಮಿತ್ರರಿಗೆ ಹಂಚುತ್ತಿದ್ದಾರೆ.
ಇದನ್ನೂ ಓದಿ: ನಟಿ ಅಮೂಲ್ಯ, ಜಗದೀಶ್ ಪ್ರಪೋಸಲ್ ಹೇಗಾಯ್ತು: ನಟ ಗಣೇಶ್ ದಂಪತಿ ಹೇಳ್ತಾರೆ
ಮಾರ್ಚ್ 6ರಂದು ಬೆಂಗಳೂರಿನ ಶ್ರೀ ಸಾಯಿ ಪ್ಯಾಲೇಸ್ನಲ್ಲಿ ಅಮೂಲ್ಯ ಹಾಗೂ ಜಗದೀಶ್ ಅವರ ನಿಶ್ಚಿತಾರ್ಥ ನೆರವೇರಿತ್ತು. ಅಮೂಲ್ಯ ಕೈ ಹಿಡಿಯಲಿರುವ ಜಗದೀಶ್ ಮಾಜಿ ಕಾರ್ಪೋರೇಟರ್ ಮಗ. ಲಂಡನ್ನಲ್ಲಿ ಎಂಬಿಎ ಮಾಡಿದ್ದು ಬೆಂಗಳೂರಿನ ಆರ್ ಆರ್ ನಗರ ನಿವಾಸಿಯಾಗಿದ್ದಾರೆ.