ತುಮಕೂರು: ಅಡುಗೆ ಅನಿಲ ಸೋರಿಕೆಯಿಂದ ಮನೆಗೆ ಬೆಂಕಿ ತಗುಲಿ ಮನೆ ಸಂಪೂರ್ಣ ಭಸ್ಮವಾದ ಘಟನೆ ತುಮಕೂರು ಜಿಲ್ಲೆಯ ಚಿಕ್ಕಹಳ್ಳಿಯಲ್ಲಿ ಘಟನೆ ನಡೆದಿದೆ.
- Advertisement 2
ಮನೆ ಮಾಲೀಕ ಹಿರೇಹಳ್ಳಿ ಗ್ರಾಮ ಪಂಚಾಯ್ತಿ ಸದಸ್ಯ ನಾಗರಾಜು ಕುಟುಂಬಸ್ಥರೊಂದಿಗೆ ದೇವರ ಹೊಸಹಳ್ಳಿಯ ವೀರಭದ್ರಸ್ವಾಮಿಯ ಜಾತ್ರಾ ಮಹೋತ್ಸವಕ್ಕೆ ತೆರಳಿದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಮನೆಯಲ್ಲಿ ಯಾರು ಇಲ್ಲದರಿಂದ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
- Advertisement 3
ಸ್ಥಳಕ್ಕೆ ಮೂರು ಅಗ್ನಿಶಾಮಕ ದಳ ವಾಹನಗಳು ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ.