ನ್ಯೂಯಾರ್ಕ್: ಪಾಕಿಸ್ತಾನ ಈಗ ಟೆರರಿಸ್ತಾನವಾಗಿದ್ದು, ವಿಶ್ವಕ್ಕೆ ಭಯೋತ್ಪಾದನೆ ಅಲ್ಲಿಂದಲೇ ರಫ್ತಾಗುತ್ತಿದೆ ಎಂದು ವಿಶ್ವಸಂಸ್ಥೆಯ ಮಹಾ ಅಧಿವೇಶನದಲ್ಲಿ ಭಾರತ ವಾಗ್ದಾಳಿ ನಡೆಸಿದೆ.
ಗುರುವಾರ ವಿಶ್ವಸಂಸ್ಥೆಯಲ್ಲಿ ಭಾಷಣ ಮಾಡಿದ ಪಾಕ್ ಪ್ರಧಾನಿ ಶಾಹೀದ್ ಅಬ್ಬಾಸಿ, ಪಾಕಿಸ್ತಾನದಲ್ಲಿ ಉಗ್ರರ ನೆಲೆಗಳಿಲ್ಲ. ಉಗ್ರ ಚಟುವಟಿಕೆಗಳನ್ನು ನಿಗ್ರಹಿಸುವಲ್ಲಿ ನಾವು ವಿಫಲರಾಗಿಲ್ಲ ಎಂದು ಹೇಳಿದ್ದರು. ಈ ಹೇಳಿಕೆಗೆ ವಿಶ್ವಸಂಸ್ಥೆಯಲ್ಲಿ ಭಾರತದ ಮೊದಲ ಕಾರ್ಯದರ್ಶಿಯಾಗಿರುವ ಈನಂ ಗಂಭೀರ್ ಪ್ರತಿಕ್ರಿಯಿಸಿ, ಉಗ್ರ ಹಫೀಸ್ ಸಯೀದ್ ಪಾಕಿಸ್ತಾನದಲ್ಲಿ ರಾಜಕೀಯ ಪಕ್ಷ ಸ್ಥಾಪಿಸಿದ್ದು ಮಾತ್ರವಲ್ಲೇ ಮುಂದಿನ ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಉಗ್ರರಿಗೆ ಪಾಕ್ ಎಷ್ಟು ಸುರಕ್ಷಿತ ದೇಶ ಎನ್ನುದ್ದಕ್ಕೆ ಇದೊಂದೆ ಉದಾಹರಣೆ ಸಾಕು ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ.
ಒಸಾಮಾ ಬಿನ್ ಲಾಡೆನ್ ಮತ್ತು ಮುಲ್ಲಾ ಓಮರ್ಗೆ ಪಾಕಿಸ್ತಾನ ರಕ್ಷಣೆ ನೀಡಿದೆ. ಭಯೋತ್ಪಾದನೆ ಅಲ್ಲಿನ ಉದ್ಯಮವಾಗಿ ಈಗ ಪರಿವರ್ತನೆಯಾಗಿದೆ. ಪಾಕ್ ಮಿಲಿಟರಿ ಮತ್ತು ರಾಜಕೀಯ ನಾಯಕರ ಜೊತೆ ಉಗ್ರರು ಉತ್ತಮ ನಂಟನ್ನು ಹೊಂದಿದ್ದಾರೆ ಎಂದು ಗಂಭೀರ್ ಹೇಳುವ ಮೂಲಕ ಪಾಕಿಸ್ತಾನದ ಮಾನವನ್ನು ಹರಾಜು ಹಾಕಿದರು.
ಕಾಶ್ಮೀರ ಸಮಸ್ಯೆಗೆ ವಿಶ್ವಸಂಸ್ಥೆ ಮಧ್ಯೆ ಪ್ರವೇಶಿಸಬೇಕು. ಭಾರತದಿಂದ ಕದನ ವಿರಾಮ ಉಲ್ಲಂಘನೆ ಆಗುತ್ತಿದ್ದು, ಗಡಿಯ ಅಶಾಂತಿಗೆ ನಾವು ಕಾರಣರಲ್ಲ ಎಂದು ಪಾಕ್ ಪ್ರಧಾನಿ ಹೇಳಿದ್ದರು. ಇದಕ್ಕೆ ಈನಂ ಗಭೀರ್, ಉಗ್ರರನ್ನು ಕಳುಹಿಸಿ ಭಾರತ ಮೇಲೆ ದಾಳಿ ನಡೆಸುವ ನಿಮ್ಮ ತಂತ್ರ ಎಂದಿಗೂ ಸಫಲವಾಗುವುದಿಲ್ಲ. ಜಮ್ಮು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದೆ ಎನ್ನುವುನ್ನು ನೆನಪಿನಲ್ಲಿರಲಿ ಎಂದು ಹೇಳುವ ಮೂಲಕ ಖಾರವಾಗಿ ಪ್ರತಿಕ್ರಿಯಿಸಿದರು.
Pakistan is now Terroristan
"Quest for a land of pure has produced the land of pure terror" – @IndiaUNNewYork replies to Pakistan @UN pic.twitter.com/5iTkHec6KU
— India at UN, NY (@IndiaUNNewYork) September 22, 2017