ಬೆಂಗಳೂರು: ಮಹದಾಯಿ ಯೋಜನೆಗೆ ಅವಕಾಶ ಇಲ್ಲ. ಮಹಾರಾಷ್ಟ್ರ, ಕರ್ನಾಟಕ, ಗೋವಾದಲ್ಲಿ ಮಹದಾಯಿ ಹರಿಯುತ್ತಿದ್ದು, ನದಿ ಮೇಲೆ ಮೂರೂ ರಾಜ್ಯಗಳ ಹಕ್ಕಿದೆ ಅಂತಾ ಗೋವಾ ಸಿಎಂ ಮನೋಹರ್ ಪರಿಕ್ಕರ್ ಹೇಳಿದ್ದಾರೆ.
ಕರ್ನಾಟಕ ಮಹದಾಯಿ ನದಿಯನ್ನು ಬೇರೆಡೆಗೆ ತಿರುಗಿಸಲು, ಬೇರೆ ನದಿಪಾತ್ರಕ್ಕೆ ಹರಿಸಲು ಅವಕಾಶ ನೀಡುವುದಿಲ್ಲ. ನದಿಪಾತ್ರದ ಪ್ರದೇಶದಲ್ಲೇ ನೀರನ್ನು ಬಳಸಿಕೊಳ್ಳಬೇಕು. ನಾನು ಬಿಎಸ್ ಯಡಿಯೂರಪ್ಪಗೆ ಬರೆದ ಪತ್ರದಲ್ಲಿ ನ್ಯಾಯಮಂಡಳಿಯ ವ್ಯಾಪ್ತಿಯಲ್ಲೇ ಮಾತುಕತೆ ನಡೆಸುವ ಬಗ್ಗೆ ಸ್ಪಷ್ಟಪಡಿಸಿದ್ದೇನೆ ಎಂದಿದ್ದಾರೆ.
ಕರ್ನಾಟಕದ ಮುಖ್ಯಮಂತ್ರಿಗಳು ಮಹದಾಯಿ ನದಿ ಪಾತ್ರ ತಿರುವಿನ ಬೇಡಿಕೆ ಇಟ್ಟಿದ್ದಾರೆ. ಅಂತರರಾಜ್ಯ ನದಿ ನೀರು ವಿವಾದ ಕಾಯ್ದೆ ಪ್ರಕಾರ, ನೀರಿನ ಕೊರತೆ ಇರುವ ನದಿ ಪಾತ್ರದಿಂದ ನೀರನ್ನು ಬೇರೆಡೆಗೆ ತಿರುಗಿಸುವುದಕ್ಕೆ ಅವಕಾಶ ಇಲ್ಲ. ಮಹದಾಯಿ ನದಿಯಲ್ಲಿ ನೀರಿನ ಕೊರತೆ ಇದೆ ಎಂಬುದನ್ನು ನಾವು ದಾಖಲೆ ಸಮೇತ ಸಾಬೀತು ಮಾಡಿದ್ದೇವೆ ಅಂತಾ ಹೇಳಿದ್ದಾರೆ.