ಕಲಬುರಗಿ: ಅಲೆಮಾರಿ ಜನಾಂಗದ ಮಕ್ಕಳನ್ನು ಮುಖ್ಯ ವಾಹಿನಿಗೆ ತರಲು ಸರ್ಕಾರ ಹಲವು ಯೋಜನೆ ತಂದರೂ ಪ್ರಯೋಜನವಾಗಿಲ್ಲ. ಆದ್ರೆ ಕಲಬುರಗಿಯ ಮಹೇಶ್ವರನಂದ ಸ್ವಾಮೀಜಿಗಳು, ಅಲೆಮಾರಿ ಮಕ್ಕಳಿಗಾಗಿಯೇ ಶಾಲೆ ತೆಗೆದಿದ್ದಾರೆ. ರಾಜ್ಯದ ಮೂಲೆ-ಮೂಲೆ ಸುತ್ತಿ ಸಾವಿರಾರು ಮಕ್ಕಳಿಗೆ ಉಚಿತ ಶಿಕ್ಷಣ ಜೊತೆ ವಸತಿ ಸೌಕರ್ಯ ನೀಡುತ್ತಿದ್ದಾರೆ.
ಕಲಬುರಗಿ ತಾಲೂಕಿನ ತಾಡತೆಗನೂರ ಗ್ರಾಮದ ವಿವೇಕಾನಂದ ವಿದ್ಯಾಪೀಠದ ಅಧ್ಯಕ್ಷರಾದ ಮಹೇಶ್ವರನಂದ ಸ್ವಾಮೀಜಿ ಅಲೆಮಾರಿ ಜನಾಂಗದ ಮಕ್ಕಳ ಪೋಷಕರಿಗೆ ಶಿಕ್ಷಣದ ಬಗ್ಗೆ ತಿಳುವಳಿಕೆ ನೀಡುತ್ತಾರೆ. ರಾಜ್ಯದ ಮೂಲೆ ಮೂಲೆಗೆ ಹೋಗಿ ಅಲೆಮಾರಿ ಜನಾಂಗದ ಮಕ್ಕಳನ್ನು ಕರೆ ತಂದು ತಮ್ಮ ಶಾಲೆಯಲ್ಲಿ ಶಿಕ್ಷಣ ಕೊಡುತ್ತಿದ್ದಾರೆ. ಈ ಮೂಲಕ, ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದ ಮಕ್ಕಳಿಗೆ ದಾರಿದೀಪವಾಗಿದ್ದಾರೆ.
2002ರಲ್ಲಿ ಶ್ರೀಗಳು ಅಲೆಮಾರಿ ಜನಾಂಗದ ಮಕ್ಕಳನ್ನು ಮುಖ್ಯ ವಾಹಿನಿಗೆ ತರಲು ಈ ಶಿಕ್ಷಣ ಸಂಸ್ಥೆ ಹುಟ್ಟು ಹಾಕಿದರು. ಕಳೆದ 15 ವರ್ಷಗಳಲ್ಲಿ ಈ ಶಾಲೆಯಲ್ಲಿ 8 ಸಾವಿರಕ್ಕೂ ಅಧಿಕ ಅಲೆಮಾರಿ ಜನಾಂಗದ ಮಕ್ಕಳು ಶಿಕ್ಷಣ ಪಡೆದಿದ್ದಾರೆ. ಶ್ರೀಗಳ ಕಾರ್ಯ ಮೆಚ್ಚಿ ಹಿಂದಿನ ರಾಷ್ಟ್ರಪತಿ ಎ.ಪಿ.ಜೆ ಅಬ್ದುಲ್ ಕಲಾಂ ಖುದ್ದು ಶಾಲೆಗೆ ಭೇಟಿ ನೀಡಿ, ಶ್ಲಾಘಿಸಿದ್ದರು.
ಅಲೆಮಾರಿ ಜನಾಂಗದ ಮಕ್ಕಳನ್ನು ಮುಖ್ಯ ವಾಹಿನಿಗೆ ತರಲು ಸರ್ಕಾರದ ಯತ್ನ ವಿಫಲವಾಗಿದ್ದರೂ, ಶ್ರೀಗಳು ಯಶಸ್ವಿಯಾಗಿದ್ದಾರೆ.
https://www.youtube.com/watch?v=TxziRBYSK44&pbjreload=10