ವಿಜಯಪುರ: ಐಟಿ ಅಧಿಕಾರಿಗಳು ನಮ್ಮ ಕರೆಗಳನ್ನು ಕದ್ದಾಲಿಕೆ ಮಾಡುತ್ತಿದ್ದಾರೆಂದು ರಾಜ್ಯ ಜಲಸಂಪನ್ಮೂಲ ಸಚಿವ ಎಂ ಬಿ ಪಾಟೀಲ್ ಗಂಭೀರ ಆರೋಪ ಮಾಡಿದ್ದಾರೆ.
ವಿಜಯಪುರದ ಭಲೇಶ್ವರದಲ್ಲಿ ಮಾತನಾಡಿದ ಪಾಟೀಲ್, ಐಟಿ ಅಧಿಕಾರಿಗಳು ಒಂದು ವರ್ಷದಿಂದ ನನ್ನ ಫೋನ್ ಟ್ಯಾಪ್ ಮಾಡಿದ್ದಾರೆ. ಅಲ್ಲದೆ ನನ್ನ ಪತ್ನಿ, ಪುತ್ರ ಹಾಗೂ ನನ್ನ ವ್ಯವಹಾರಗಳನ್ನು ನೋಡಿಕೊಳ್ಳುವ ವಕೀಲರು, ಅವ್ರ ಪತ್ನಿಯ ಫೋನ್ ಕರೆಗಳನ್ನು ಐಟಿ ಅಧಿಕಾರಿಗಳು ಟ್ಯಾಪ್ ಮಾಡುತ್ತಿದ್ದಾರೆ ಎಂದರು.
ಇಂಧನ ಸಚಿವ ಡಿ.ಕೆ.ಶಿವಕುಮಾರ್, ಲೋಕೋಪಯೋಗಿ ಸಚಿವ ಮಹದೇವಪ್ಪ, ಬೆಂಗಳೂರು ಅಭಿವೃದ್ಧಿ ಸಚಿವ ಕೆಜೆ ಜಾರ್ಜ್ ಸೇರಿದಂತೆ ಬಹಳ ಜನರ ಮೊಬೈಲ್ ಟ್ಯಾಪ್ ಮಾಡಲಾಗ್ತಿದೆ. ರಾಜಕೀಯ ದುರುದ್ದೇಶದಿಂದ ಕೇಂದ್ರ ಸರ್ಕಾರ, ಐಟಿ ಇಲಾಖೆ ಅಥವಾ ಗೃಹ ಇಲಾಖೆ ಫೋನ್ ಟ್ಯಾಪ್ ಮಾಡ್ತಿದೆ ಎಂದರು.
ಶೀಘ್ರದಲ್ಲೇ ಫೋನ್ ಟ್ಯಾಪಿಂಗ್ ಬಗ್ಗೆ ದೂರು ನೀಡುವುದಾಗಿ ತಿಳಿಸಿದರು. ಇನ್ನು ಯಾವ ರೀತಿ ಟ್ಯಾಪ್ ಮಾಡಲಾಗ್ತಿದೆ ಅನ್ನೋದನ್ನ ಮುಂದಿನ ದಿನಗಳಲ್ಲಿ ನಿಮ್ಮ ಮುಂದೆ ತೋರಿಸ್ತೇನೆ ಎಂದು ಮಾಧ್ಯಮಗಳಿಗೆ ಸಚಿವ ಪಾಟೀಲ್ ಸ್ಪಷ್ಟಪಡಿಸಿದರು.
ಬೆಂಗಳೂರಿನ ಪರಿವರ್ತನಾ ಯಾತ್ರೆ ಫೇಲ್ಯೂರ್: 1 ವಾರದ ಒಳಗಡೆ ವರದಿ ನೀಡುವಂತೆ ಶಾ ತಾಕೀತು https://t.co/oKvmA6n2tw#bengaluru #bjp #parivartanyatra pic.twitter.com/6l7jGBh0r6
— PublicTV (@publictvnews) November 6, 2017
ಎಂ.ಬಿ.ಪಾಟೀಲ್, ವಿನಯ್ ಕುಲಕರ್ಣಿ ಖಾದಿ ಬಿಟ್ಟು ಖಾವಿ ತೊಡಲಿ: ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ https://t.co/O35FvX74sC
#Lingayata #ASPatilNadahalli #JDS pic.twitter.com/XJ1v5C7E8L
— PublicTV (@publictvnews) November 6, 2017