ಬೀದರ್: ಐಸಿಸಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಫೈನಲ್ ನಲ್ಲಿ ಪಾಕ್ ವಿರುದ್ಧ ಭಾರತ ಸೋತಿದ್ದು ಅವಮಾನವಾಗಿದೆ. ಈ ಬಗ್ಗೆ ತಖೆಯಾಗಬೇಕು ಎಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ಸಚಿವ ರಾಮದಾಸ್ ಅಠವಾಲೆ ಕೊಹ್ಲಿ ವಿರುದ್ಧ ಕಿಡಿಕಾರಿದ್ದಾರೆ.
ಬೀದರ್ನ ವಸತಿಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಸಚಿವರು, ಹೀನಾಯವಾಗಿ ಪಾಕಿಸ್ತಾನದ ವಿರುದ್ಧ ಸೋತಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ರು. ಟೀಂ ಇಂಡಿಯಾವನ್ನು ಬದಲಾವಣೆ ಮಾಡಬೇಕು. ಈ ಪಂದ್ಯದ ಬಗ್ಗೆ ತನಿಖೆಯಾಗಬೇಕು. ಕ್ರಿಕೆಟ್ ಮತ್ತು ಕ್ರೀಡೆಯಲ್ಲಿ ದಲಿತರಿಗೆ ಶೇ.25 ಮೀಸಲಾತಿ ನೀಡಬೇಕು ಎಂದು ಅವರು ಆಗ್ರಹಿಸಿದ್ರು.
ಇದನ್ನೂ ಓದಿ: ಭಾರತಕ್ಕೆ ಹೀನಾಯ ಸೋಲು: ಮೊದಲ ಬಾರಿಗೆ ಚಾಂಪಿಯನ್ಸ್ ಟ್ರೋಫಿಗೆ ಮುತ್ತಿಟ್ಟ ಪಾಕ್
ಬಳಿಕ ಹೋ ರಕ್ಷಣೆ ಬಗ್ಗೆ ಮಾತನಾಡಿದ ಸಚಿವರು, ಇಂದು ಗೋ ರಕ್ಷಣೆ ಹೆಸರಿನಲ್ಲಿ ಗೂಂಡಾಗಿರಿ ನಡೆಯುತ್ತಿದ್ದು, ಕಾನೂನು ಕ್ರಮ ಕೈಗೆತ್ತಿಕೊಳ್ಳಬೇಕು. ಗೋ ರಕ್ಷಣೆ ಹೆಸರಿನಲ್ಲಿ ದಲಿತ ಹಾಗೂ ಮುಸ್ಲಿಮರ ಕೊಲೆಯಾಗುತ್ತಿದ್ದು, ಮೋದಿ ಸರ್ಕಾರವನ್ನು ಕೆಡಿಸಲು ಹುನ್ನಾರ ಮಾಡುತ್ತಿದ್ದಾರೆ ಎಂದು ರಾಮದಾಸ್ ಅಠವಾಲೆ ನಕಲಿ ಗೋ ರಕ್ಷಕರ ವಿರುದ್ಧ ಕಿಡಿಕಾರಿದರು.