ಉಡುಪಿ: ಕುಂದಾಪುರದಿಂದ ಉಡುಪಿಯತ್ತ ಸಾಗುತ್ತಿದ್ದ ಮೂವರು ಯುವತಿಯರು ಹಾಗೂ ಇಬ್ಬರು ಯುವಕರಿದ್ದ ಕಾರನ್ನು ಹಿಂದೂ ಸಂಘಟನೆ ಕಾರ್ಯಕರ್ತರು ಅಡ್ಡಗಟ್ಟಿ ಪೊಲೀಸರಿಗೊಪ್ಪಿಸಿದ ಘಟನೆ ಕೋಟೇಶ್ವರದಲ್ಲಿ ಸೋಮವಾರ ರಾತ್ರಿ ನಡೆದಿದೆ.
ಯುವಕ-ಯುವತಿಯರನ್ನು ಉಡುಪಿಯ ಕಾಲೇಜೊಂದರ ವಿದ್ಯಾರ್ಥಿಗಳೆಂದು ಗುರುತಿಸಲಾಗಿದೆ. ಯುವಕ ಯುವತಿಯರು ಕುಂದಾಪುರದ ಮರವಂತೆ ಬೀಚ್ ನಲ್ಲಿ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದರು. ಸಾರ್ವಜನಿಕ ಸ್ಥಳದಲ್ಲಿ ವರ್ತನೆ ಸರಿಯಿಲ್ಲವೆಂದು ಆರೋಪಿಸಿ ಹಿಂದೂಪರ ಸಂಘಟನೆ ಕಾರ್ಯಕರ್ತರು ಯುವಕ ಯುವತಿಯರಿದ್ದ ಕಾರನ್ನು ಹಿಂಬಾಲಿಸಿ ಕೋಟೇಶ್ವರದಲ್ಲಿ ಅಡ್ಡಗಟ್ಟಿ ಕುಂದಾಪುರ ಪೊಲೀಸರಿಗೊಪ್ಪಿಸಿದ್ದರು.
ಪೊಲೀಸ್ ಠಾಣೆಗೆ ನೂರಾರು ಮಂದಿ ಹಿಂದೂ ಸಂಘಟನೆ ಕಾರ್ಯಕರ್ತರು ಹೋಗಿದ್ದ ಹಿನ್ನೆಲೆ ಠಾಣೆಯಲ್ಲಿ ಕೆಲಕಾಲ ಬಿಗುವಿನ ವಾತಾವರಣ ಸೃಷ್ಟಿಯಾಯ್ತು. ಕಾರಣ ಪೊಲೀಸರು ಗರಂ ಆದ್ರು ಅಲ್ಲದೆ ಹಿಂದೂ ಸಂಘಟನೆ ಕಾರ್ಯಕರ್ತರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಪೊಲೀಸರು ಸಂಘಟನೆ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಯುವಕ ಯುವತಿಯರ ಪೈಕಿ ಹಿಂದೂ ಮತ್ತು ಮುಸ್ಲಿಮ್ ಧರ್ಮಿಯರು ಇದ್ದರೆಂಬೂದೇ ಈ ಎಲ್ಲಾ ಬೆಳವಣಿಗೆಗೆ ಕಾರಣವಾಗಿದೆ ಎಂದು ಹೇಳಲಾಗಿದೆ.