ಮೈಸೂರು: ಸರ್ಕಾರದ ಅಭಿವೃದ್ಧಿ ಕೆಲಸಗಳನ್ನ ನೋಡಿ ಜನರು ನನಗೆ ಮತ ಹಾಕಿದ್ದಾರೆ ಅಂತಾ ನಂಜನಗೂಡಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಳಲೆ ಕೇಶ ಮೂರ್ತಿ ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಮತ ಎಣಿಕೆ ಕೇಂದ್ರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಶವ ಮೂರ್ತಿ, ಇದು ಹಣದಿಂದ ಆಗಿರುವ ಚುನಾವಣೆಯಲ್ಲ ಅಭಿವೃದ್ಧಿ ನೋಡಿ ಮತ ಹಾಕಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಮತದಾರರು ಆಶೀರ್ವಾದಿಸಿದ್ದಾರೆ ಅಂತಾ ಹೇಳಿದ್ದಾರೆ.
- Advertisement 2
- Advertisement 3
ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದು, ಆರಂಭಿಕ ಹಂತದಿಂದಲೂ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿಕೊಂಡು ಬಂದಿದೆ.
- Advertisement 4
ಮೂರನೇ ಸುತ್ತಿನಲ್ಲೂ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು, ಕಳಲೆ ಕೇಶವಮೂರ್ತಿ 18,477 ಮತಗಳನ್ನು ಪಡೆದರೆ, ಶ್ರೀನಿವಾಸ ಪ್ರಸಾದ್ 9,244 ಮತಗಳಿಂದ ಹಿನ್ನಡೆ ಸಾಧಿಸಿದ್ದಾರೆ.
#Karnataka #bypolls: #Congress lead on #Nanjanagudu seats after third round of counting @raveeshmysore @kp_nagaraj @KPCCofficial pic.twitter.com/IaL7J2lVYv
— PublicTV (@publictvnews) April 13, 2017