ದಾವಣಗೆರೆ: ಕುರಿ ಕಾಯಲು ಹೋಗಿದ್ದ ಕುರಿಗಾಹಿಯೊಬ್ಬರು ಹರಿದು ಬಿದ್ದ ವಿದ್ಯುತ್ ತಂತಿ ತುಳಿದು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಎರ್ಲಕಟ್ಟೆ ಗ್ರಾಮದಲ್ಲಿ ನಡೆದಿದೆ.
ಮಡ್ರಳ್ಳಿ ಅರಣ್ಯ ಪ್ರದೇಶದ ಬಳಿ ಇಂದು ಬೆಳಗ್ಗೆ ಸುಮಾರು 11 ಗಂಟೆಗೆ ಈ ಘಟನೆ ಸಂಭವಿಸಿದೆ. ಮಂಜಣ್ಣ (23)ಮೃತ ದುರ್ದೈವಿ.
- Advertisement 2
ಮಡ್ರಳ್ಳಿಯಲ್ಲಿ ರಸ್ತೆ ಮೇಲೆ ಮಂಜಣ್ಣ ಅವರು ಕುರಿ ಕಾಯಲು ಹೋಗಿದ್ದಾಗ ಮಳೆಗೆ ಹರಿದು ಬಿದ್ದ ವಿದ್ಯುತ್ ತಂತಿಯನ್ನು ತುಳಿದ್ದಾರೆ. ಈ ವಿದ್ಯುತ್ ಆಘಾತದಿಂದ ಅವರ ಸೊಂಟದ ಕೆಳಗಿನ ಭಾಗ ಸುಟ್ಟು ಕರಕಲಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.
- Advertisement 3
ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸಬೇಕಾಗಿದ್ದ ಮಂಜಣ್ಣ ಅವರ ಕುಟುಂಬದ ಮೇಲೆ ಸೂತಕದ ಛಾಯೆ ಕವಿದಿದೆ. ವಿದ್ಯುತ್ ತಂತಿ ಬಲಿ ತೆಗೆದುಕೊಂಡಿದ್ದರಿಂದ ಬೆಸ್ಕಾಂ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Advertisement 4
ಜಗಳೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.