ದಾವಣಗೆರೆ: ಕಳ್ಳತನ ಮಾಡಿ ಓಡಿ ಹೋಗುವಾಗ ಕಳ್ಳನೊಬ್ಬ ಕಟ್ಟಡದ ಮೇಲಿಂದ ಬಿದ್ದು ಸಾವನ್ನಪ್ಪಿರುವ ಘಟನೆ ದಾವಣಗೆರೆಯ ನಿಟ್ಟುವಳ್ಳಿ ಬಡಾವಣೆಯಲ್ಲಿ ನಡೆದಿದೆ.
ಭಾನುವಾರ ರಾತ್ರಿ ಕಳ್ಳತನ ಮಾಡಲು ಬಂದಿದ್ದ ಐದು ಜನ ಕಳ್ಳರು ಮಹಿಳೆಯ ಸರಗಳ್ಳತನ ಮಾಡಲು ಮುಂದಾಗಿದ್ದಾರೆ. ಈ ವೇಳೆ ಕಳ್ಳರನ್ನು ನೋಡಿದ ಮಹಿಳೆ ಕೂಗಿಕೊಂಡಿದ್ದರಿಂದ ಕಂಗಾಲಾಗಿ ಓಡಿ ಹೋಗಲು ಯತ್ನಿಸಿದ್ದಾರೆ.
- Advertisement 2
ಕಟ್ಟಡದಿಂದ ಕಟ್ಟಡಕ್ಕೆ ಹಾರಿ ನಾಲ್ವರು ಕಳ್ಳರು ತಪ್ಪಿಸಿಕೊಂಡಿದ್ದಾರೆ. ಆದರೆ ಒಬ್ಬ ಕಳ್ಳ ಮಾತ್ರ ಕಟ್ಟಡ ಹಾರುವಾಗ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾನೆ. ಆಯ ತಪ್ಪಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
- Advertisement 3
ಇತ್ತೀಚಿಗೆ ದಾವಣಗೆರೆ ನಗರದಲ್ಲಿ ಸರಣಿಗಳ್ಳತನ ನಡೆಯುತ್ತಿದೆ. ಎರಡು ದಿನಗಳ ಹಿಂದೆ ದೇವಸ್ಥಾನ ಹಾಗೂ ಅಂಗಡಿಗಳಲ್ಲಿ ಕಳ್ಳತನಗಳು ನಡೆದಿದ್ದವು. ಈ ಘಟನೆ ಕೆಟಿಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಪೊಲೀಸರು ತನಿಖೆ ನಡೆಸುತ್ತಿದ್ದು, ಮೃತ ಕಳ್ಳನ ಗುರುತು ಇನ್ನು ಪತ್ತೆಯಾಗಿಲ್ಲ.
- Advertisement 4