ಕಲಬುರಗಿ: ನಾಟಕದಲ್ಲಿ ನೃತ್ಯ ಮಾಡುವ ಯುವತಿಗೆ ಹಣ ನೀಡುವ ವಿಚಾರದಲ್ಲಿ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸುಲಿಹಾಳ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ.
48 ವರ್ಷದ ಸಿದ್ದಯ್ಯ ಮೃತ ದುರ್ದೈವಿ. ಶುಕ್ರವಾರ ರಾತ್ರಿ ಗ್ರಾಮದಲ್ಲಿ `ತಾಳಿ ಹರೀಲಿಲ್ಲ, ಶೀಲ ಉಳೀಲಿಲ್ಲ’ ಎಂಬ ನಾಟಕ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಸಿದ್ದಯ್ಯ ನಾಟಕದ ಕಲಾವಿದೆಯೊಬ್ಬರಿಗೆ ಪದೇ ಪದೇ ಹಣ ನೀಡುತ್ತಿದ್ದರು. ಇದಕ್ಕೆ ಅದೇ ಗ್ರಾಮದ ಅಯ್ಯಪ್ಪ ಆಕ್ಷೇಪ ವ್ಯಕ್ತಪಡಿಸಿ ಕಲ್ಲಿನಿಂದ ಹಲ್ಲೆ ಮಾಡಿದ್ದಾನೆ.
ಇದನ್ನೂ ಓದಿ: ಮಗಳಿಗೆ ನ್ಯಾಯ ಕೊಡಿಸಲಾಗ್ಲಿಲ್ಲ ಎಂಬ ಪಶ್ಚಾತ್ತಾಪದಿಂದ ಆತ್ಮಹತ್ಯೆಗೆ ಶರಣಾದ ತಂದೆ
ಗಾಯಗೊಂಡ ಸಿದ್ದಯ್ಯ ಮನೆಗೆ ತೆರಳಿದ್ದರು. ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದಿದ್ದರಿಂದ ಸಿದ್ದಯ್ಯ ಮನೆಯಲ್ಲಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಚಿತ್ತಾಪುರ ಠಾಣಾ ಪೊಲೀಸರು ಆಗಮಿಸಿದ್ದು, ಆರೋಪಿ ಅಯ್ಯಪ್ಪನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.