ಚಿಕ್ಕಬಳ್ಳಾಪುರ: ಎಲ್ಲಾ ದಾನಗಳಿಗಿಂತ ನೇತ್ರದಾದ ದೊಡ್ಡದು ಅಂತಾರೆ. ಹಾಗೇ ದೊಡ್ಡಬಳ್ಳಾಪುರದಲ್ಲಿ ಒಬ್ಬರು ನೇತ್ರದಾನದ ಅರಿವು ಮೂಡಿಸಿ ಈವರೆಗೂ 800ಕ್ಕೂ ಹೆಚ್ಚು ಮಂದಿಯಿಂದ ನೇತ್ರದಾನ ಮಾಡಿಸಿ ಅಂಧರ ಬಾಳಿನ ಬೆಳಕಾಗಿದ್ದಾರೆ.
- Advertisement 2
ಖಾಸಗಿ ಶಿಕ್ಷಣ ಸಂಸ್ಥೆಗಳ ಮಾಲೀಕರು ಮತ್ತು ದೊಡ್ಡಬಳ್ಳಾಪುರದ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿರುವ ಗುರುದೇವ ಎಂ.ಬಿ. ಅವರು ಇವತ್ತಿನ ನಮ್ಮ ಪಬ್ಲಿಕ್ ಹೀರೋ. ದೊಡ್ಡಬಳ್ಳಾಪುರ ನಗರದಲ್ಲೇ ಬರೋಬ್ಬರಿ 14,000 ಜನರಿಂದ ನೇತ್ರದಾನ ಮಾಡುವ ಪ್ರತಿಜ್ಞೆ ಮಾಡಿದ್ದರು. 7 ವರ್ಷಗಳ ಹಿಂದೆ ದೊಡ್ಡಬಳ್ಳಾಪುರದಲ್ಲಿ ಅಭಿಷೇಕ್ ನೇತ್ರಾಲಯ ಶುರುವಾಗಿತ್ತು. ವೈದ್ಯರಾದ ಹರೀಶ್, ಗುರುದೇವ್ ಅವರ ಸಮಾಜಸೇವೆಗೆ ಸಾಥ್ ಕೊಟ್ಟಿದ್ದಾರೆ. ಇವರ ಜೊತೆ ಒಂದಿಷ್ಟು ವೈದ್ಯರು ಕೈಜೋಡಿಸಿ 7 ವರ್ಷಗಳಲ್ಲಿ 814 ಮಂದಿಯಿಂದ ನೇತ್ರದಾನ ಮಾಡಿಸಿ ಅಂಧರ ಬಾಳಿಗೆ ಬೆಳಕಾಗಿದ್ದಾರೆ. ಯಾರಾದರೂ ಸತ್ತರೆ ಅವರ ಕುಟುಂಬಕ್ಕೆ ಸಾಂತ್ವನ ಹೇಳಿ ನೇತ್ರದಾನಕ್ಕೆ ಮನವೊಲಿಸುತ್ತಾರೆ.
- Advertisement 3
- Advertisement 4
ಗುರುದೇವ್ ಅಂಡ್ ಟೀಂಗೆ ರಾಜ್ಕುಮಾರ್ ನೇತ್ರ ಭಂಡಾರ ಹಾಗೂ ನಾರಾಯಣ ನೇತ್ರಾಲಯದವರು ಸಾಥ್ ಕೊಟ್ಟಿದ್ದಾರೆ. ಬೆಂಗಳೂರಿನಿಂದ ಬಂದು ಅವರೇ ಕಣ್ಣುಗಳನ್ನ ತೆಗೆದುಕೊಂಡು ಹೋಗಿ, ಬಡವರಿಗೆ ಅಳವಡಿಸುತ್ತಾರೆ.
7 ವರ್ಷಗಳಲ್ಲಿ 800ಕ್ಕೂ ಹೆಚ್ಚು ಮಂದಿಯಿಂದ ನೇತ್ರದಾನ ಮಾಡಿಸಿ, ತಾಲೂಕು ಮಟ್ಟದಲ್ಲೇ ಅತ್ಯಂತ ನೇತ್ರದಾನ ಮಾಡಿಸಿದ ಹೆಗ್ಗಳಿಕೆ ಗುರುದೇವ್ ತಂಡದ ಪಾಲಾಗಿದೆ.