ರಾಮನಗರ: ಬಸ್ ಹತ್ತುವ ವೇಳೆ ಆಯತಪ್ಪಿ ಬಿದ್ದ ವಿದ್ಯಾರ್ಥಿನಿ (Student) ಕಾಲಿನ ಮೇಲೆ ಬಸ್ ಚಕ್ರ ಹರಿದು (Bus Accident), ಕಾಲು ಮುರಿತವಾಗಿರುವ ಘಟನೆ ರಾಮನಗರದಲ್ಲಿ (Ramanagar) ನಡೆದಿದೆ.
ಜಿಲ್ಲೆಯ ಬಿಡದಿಯ ಭೈರಮಂಗಲ ಕ್ರಾಸ್ನಲ್ಲಿ ವಿದ್ಯಾರ್ಥಿನಿ ವಿದ್ಯಾ (19) ಬಸ್ ಹತ್ತುವ ವೇಳೆ ಆಯತಪ್ಪಿ ಬಿದ್ದಾಗ ದುರಂತ ಸಂಭವಿಸಿದೆ. ಇದನ್ನೂ ಓದಿ: ಝಾಕೀರ್ ನಾಯ್ಕ್ The Real Inspiration – ಐಸಿಸ್ ಉಗ್ರರಂತೆ ಪೋಸ್ ನೀಡಿ ಪ್ರತೀಕಾರದ ಪ್ರತಿಜ್ಞೆ
ವಿದ್ಯಾ ಬಿಡದಿಯ ಜ್ಞಾನವಿಕಾಸ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಅಪಘಾತ ನಡೆದ ತಕ್ಷಣ ಸ್ಥಳೀಯ ಆಸ್ಪತ್ರೆಗೆ (Hospital) ದಾಖಲಿಸಲಾಗಿತ್ತು. ಪರಿಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಬಿಡದಿ ಪೊಲೀಸ್ ಠಾಣೆಯಲ್ಲಿ (Bidadi Police Station) ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ತಿಹಾರ್ ಜೈಲಿನ ಬಳಿಯೇ ಕೈ ನಾಯಕಿಯ ಕಾರು ಕಳ್ಳತನ – ವೀಡಿಯೋ ಪೋಸ್ಟ್ ಮಾಡಿ ಪಂಖೂರಿ ಪಾಠಕ್ ಕಿಡಿ