ಚಿಕ್ಕಬಳ್ಳಾಪುರ: ಸ್ಯಾಂಡಲ್ ವುಡ್ ನ ರೋರಿಂಗ್ ಸ್ಟಾರ್ ಶ್ರೀಮುರುಳಿ ಸೋಮವಾರ ತಮ್ಮ ಹೊಚ್ಚ ಹೊಸ ಮಫ್ತಿ ಸಿನಿಮಾದ ಪ್ರಮೋಷನ್ ಗಾಗಿ ಚಿಕ್ಕಬಳ್ಳಾಪುರಕ್ಕೆ ಆಗಮಿಸಿದರು.
ಚಿಕ್ಕಬಳ್ಳಾಪುರ ನಗರದ ಬಾಲಾಜಿ ಚಿತ್ರಮಂದಿರದಲ್ಲಿ ಶ್ರೀಮುರುಳಿ ಹಾಗೂ ನಟ ಶಿವರಾಜ್ ಕುಮಾರ್ ಅಭಿನಯದ ಮಫ್ತಿ ಚಲನಚಿತ್ರ ಪ್ರದರ್ಶನಗೊಳ್ಳುತ್ತಿದ್ದು, ಸೋಮವಾರ ಸಂಜೆ ನಟ ಶ್ರೀಮುರುಳಿ ಚಲನಚಿತ್ರಮಂದಿರಕ್ಕೆ ಭೇಟಿ ಕೊಟ್ಟು ಆಭಿಮಾನಿಗಳ ಜೊತೆ ಮಾತುಕತೆ ನಡೆಸಿದರು.
ಚಿಕ್ಕಬಳ್ಳಾಪುರಕ್ಕೆ ಆಗಮಿಸಿದ ಶ್ರೀಮುರುಳಿಗೆ ಅಭಿಮಾನಿಗಳು ಆದರದ ಸ್ವಾಗತ ಕೋರಿ ಹೂಮಾಲೆ ಹಾಕಿ ಬರಮಾಡಿಕೊಂಡರು. ಇದೇ ವೇಳೆ ನಟ ಶ್ರೀಮುರುಳಿ ಅಭಿಮಾನಿಗಳ ಜೊತೆ ಸೆಲ್ಫೀ ತೆಗೆದುಕೊಂಡು ಅಭಿಮಾನಿಗಳ ಪ್ರೀತಿಗೆ ಪಾತ್ರರಾದರು. ಈ ವೇಳೆ ಮಾತನಾಡಿದ ಶ್ರೀ ಮುರುಳಿ, ಮಫ್ತಿ ಚಲನಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಚಿತ್ರದ ಯಶಸ್ಸು ಅಭಿಮಾನಿಗಳಿಗೆ ಸಲ್ಲಬೇಕು ಎಂದು ಹೇಳಿದರು.