ಬೆಂಗಳೂರು: ನಗರದ ಪರಪ್ಪನ ಅಗ್ರಹಾರದಲ್ಲಿದ್ದ ರೌಡಿ ನಾಗಾ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ರೌಡಿ ನಾಗನನ್ನು ಜೈಲಿನಲ್ಲಿ ಎಲ್ಲಾ ಕೈದಿಗಳ ಜೊತೆಯಲ್ಲಿಯೇ ಇರಿಸಲಾಗಿತ್ತು. ಆದ್ರೆ ನಾಗ ಮಾತ್ರ ತನಗೆ ಆರೋಗ್ಯ ಸಮಸ್ಯೆಯಿದ್ದು, ಪ್ರತ್ಯೇಕವಾಗಿ ಆಸ್ಪತ್ರೆ ವಾರ್ಡ್ನಲ್ಲಿ ಇರಿಸಿ ಎಂದು ಬೇಡಿಕೆ ಇಟ್ಟಿದ್ದನು. ನಾಗನ ಬೇಡಿಕೆಯನ್ನು ಜೈಲಾಧಿಕಾರಿಗಳು ನಿರಾಕರಿಸಿದ್ದರು.
ಇದರಿಂದ ಬೇಸರಗೊಂಡ ನಾಗ ಜೈಲಿನ ಟಾಯ್ಲೆಟನಲ್ಲಿದ್ದ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಸಹ ಕೈದಿಗಳು ನಾಗನನ್ನು ತಡೆದಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಸಿನೀಮಿಯ ಮಾದರಿಯಲ್ಲಿ ಬೆಂಗಳೂರು ಪೊಲೀಸರಿಂದ ರೌಡಿ ನಾಗ ಅರೆಸ್ಟ್
ಬಾಂಬ್ ನಾಗನ ಮನೆಯ ಮೇಲೆ ನಡೆದ ದಾಳಿಯ ಸಂದರ್ಭದ ಫೋಟೋಗಳನ್ನು ಇಲ್ಲಿ ನೀಡಲಾಗಿದೆ.