ಕಾನ್ಪುರ್: ಟೀಂ ಇಂಡಿಯಾ ಕ್ರಿಕೆಟಿಗ ಸುರೇಶ್ ರೈನಾ ಸಂಚರಿಸುತ್ತಿದ್ದ ರೇಂಜ್ ರೋವರ್ ಕಾರಿನ ಟೈರ್ ಸಿಡಿದಿದ್ದು, ಅದೃಷ್ಟವಶಾತ್ ರೈನಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸುರೇಶ್ ರೈನಾ ಅವರು ದುಲೀಪ್ ಟ್ರೋಫಿ ಟೂರ್ನಿಯಲ್ಲಿ ಭಾಗವಹಿಸಲು ಘಾಜಿಯಾಬಾದ್ ನಿಂದ ಕಾನ್ಪುರ್ಗೆ ರೇಂಜ್ ರೋವರ್ ಕಾರಲ್ಲಿ ತೆರಳುತ್ತಿದ್ದರು. ಈ ವೇಳೆ ಇಟಾವಾ ಬಳಿ ರೈನಾ ಸಂಚರಿಸುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
- Advertisement 2
ಘಟನೆ ನಡೆದ ಬಳಿಕ ಸ್ಥಳೀಯ ಪೊಲೀಸರು ರೈನಾಗೆ ಮತ್ತೊಂದು ವಾಹನದ ವ್ಯವಸ್ಥೆ ಮಾಡಿ ಕಳುಹಿಸಿದ್ದಾರೆ. ಘಟನೆಯಲ್ಲಿ ರೈನಾ ಅವರಿಗೆ ಯಾವುದೇ ತರಹದ ಗಾಯಗಳಾಗಿಲ್ಲ ಎಂದು ಡಿಎಸ್ಪಿ ರಾಜೇಶ್ ಕುಮಾರ್ ಸಿಂಗ್ ಮಾಹಿತಿ ನೀಡಿದ್ದಾರೆ.
- Advertisement 3
ಇಟಾವಾದ ಫ್ರೆಂಡ್ಸ್ ಕಾಲೋನಿ ಬಳಿ ಅಪಘಾತ ನಡೆದಿದೆ. ಕಾರಿನ ಹಿಂಬದಿ ಟೈರ್ ಸ್ಫೋಟಗೊಂಡಿದೆ. ಆದರೆ ಕಾರಿನಲ್ಲಿ ಸ್ಟೆಪ್ನಿ ಇಲ್ಲದ ಕಾರಣ ರೈನಾಗೆ ಬದಲಿ ವ್ಯವಸ್ಥೆ ಕಲ್ಪಿಸಲಾಯಿತು ಎಂಬ ಮಾಹಿತಿ ಲಭ್ಯವಾಗಿದೆ.
- Advertisement 4
https://www.instagram.com/p/BY396ZuATWg/?taken-by=sureshraina3
#NewProfilePic pic.twitter.com/dOi5g5A1CY
— Suresh Raina???????? (@ImRaina) August 26, 2017
https://www.instagram.com/p/BYwqf1yAa9w/?taken-by=sureshraina3
I added a video to a @YouTube playlist https://t.co/R0EDkh15OV SURESH RAINA SAVE IN CAR ACCIDENT II बाल बाल बचे
— DailyDiarynews (@dailydiarynews) September 12, 2017