ಚಿತ್ರದುರ್ಗ: ಎಸ್ಡಿಎಂಸಿ ಸದಸ್ಯ ಹಾಗೂ ಸಹ-ಶಿಕ್ಷಕರ ಕಿರುಕುಳ ಆರೋಪದಿಂದ ಮನನೊಂದ ಶಿಕ್ಷಕಿ ಆತ್ಮಹತ್ಯೆಗೆ ಶರಣಾದ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರದ ಅಕ್ಕಮಹಾದೇವಿ ಬಡಾವಣೆಯಲ್ಲಿ ನಡೆದಿದೆ.
- Advertisement 2
ದೇವಸಮುದ್ರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಮುಖ್ಯಶಿಕ್ಷಕಿ ತಿಪ್ಪೀರಮ್ಮ(46) ನೇಣಿಗೆ ಶರಣಾದ ದುರ್ದೈವಿಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ವಿತರಿಸುವ ಶೂ ಖರೀದಿಯಲ್ಲಿ ತಿಪ್ಪೀರಮ್ಮ ಅವ್ಯವಹಾರ ಎಸಗಿದ್ದಾರೆ ಎಂದು ದೂರು ನೀಡಲಾಗಿತ್ತು. ಈ ಕುರಿತು ಇಲಾಖಾ ಅಧಿಕಾರಿಗಳು ತನಿಖೆಯನ್ನು ನಡೆಸಿದ್ದರು. ತನಿಖೆ ಬಳಿಕ ಮುಖ್ಯಶಿಕ್ಷಕಿ ತಿಪ್ಪಿರಮ್ಮರನ್ನು ಚನ್ನಮ್ಮನ ಹಳ್ಳಿ ಶಾಲೆಗೆ ವರ್ಗಾವಣೆ ಮಾಡಿದ್ದರು. ಇದರಿಂದ ಅವಮಾನ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
- Advertisement 3
- Advertisement 4
ಎಸ್ಡಿಎಂಸಿ ಸದಸ್ಯ ಲಿಂಗಪ್ಪ, ಸಹಶಿಕ್ಷಕಿ ಸವಿತಾ, ಶಾಂತಮ್ಮ ಹಾಗೂ ಸಹಶಿಕ್ಷಕ ರಮೇಶ್ ಪ್ರತಿನಿತ್ಯ ವಿನಾಕಾರಣ ಕಿರುಕುಳ ನೀಡುತ್ತಿದ್ದರು ಎಂದು ಕುಟುಂಬದ ಸದಸ್ಯರೊಂದಿಗೆ ತಿಪ್ಪೀರಮ್ಮ ಅಳಲು ತೋಡಿಕೊಂಡಿದ್ದರು ಎಂದು ತಿಳಿದುಬಂದಿದೆ.
ಈ ಸಂಬಂಧ ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.