ಮಂಡ್ಯ: ತಿಥಿ ಸಿನಿಮಾದ ಮೂಲಕ ಚಂದನವನಕ್ಕೆ ಪಾದಾರ್ಪಣೆ ಮಾಡಿದ್ದ ಯುವ ನಟ ಅಭಿಷೇಕ್ ಇಂದು ಸಪ್ತಪದಿ ತುಳಿದಿದ್ದಾರೆ.
ನಗರದ ಆಂಜನೇಯಸ್ವಾಮಿ ಕಲ್ಯಾಣ ಮಂಟಪದಲ್ಲಿ ನಡೆದ ಮದುವೆಯಲ್ಲಿ ನಟ ಅಭಿಷೇಕ್ ತಮ್ಮದೇ ಗ್ರಾಮದ ಹೊಂಬಾಳೆಯವರನ್ನು ಮದುವೆಯಾಗಿದ್ದಾರೆ.
2015 ರಲ್ಲಿ ಬಿಡುಗಡೆಯಾಗಿದ್ದ ಸುಂದರ ಸಾಮಾಜಿಕ ಹಾಗೂ ಕಲಾತ್ಮಕ ಸಿನಿಮಾ `ತಿಥಿ’ ಮೂಲಕ ಅಭಿಷೇಕ್ ತಮ್ಮ ಸಿನಿ ಜೀವನವನ್ನು ಆರಂಭಿಸಿದ್ದರು. ವಿಮರ್ಶಕರು ಮತ್ತು ಪ್ರೇಕ್ಷಕರಿಂದ ಅಪಾರ ಮೆಚ್ಚುಗೆಯನ್ನು ಪಡೆದುಕೊಳ್ಳುವುದರ ಜೊತೆಗೆ ಸಿನಿಮಾ ರಾಷ್ಟ್ರ ಪ್ರಶಸ್ತಿಯನ್ನು ಸಹ ಪಡೆದುಕೊಂಡಿತ್ತು.
ಅಭಿಷೇಕ್ ತಿಥಿ ಸಿನಿಮಾದ ನಂತರ ತರ್ಲೆ ವಿಲೇಜ್, ಏನ್ ನಿನ್ನ ಪ್ರಾಬ್ಲಂ ಮತ್ತು ಹಳ್ಳಿ ಪಂಚಾಯ್ತಿ ಚಿತ್ರಗಳಲ್ಲಿ ನಟಿಸಿದ್ದಾರೆ.
ಮೂಲತಃ ಮಂಡ್ಯದ ಹುಲಿಕೆರೆ ಕೊಪ್ಪಲು ಗ್ರಾಮದವರಾದ ಅಭಿಷೇಕ್, ಅಕ್ಕನ ಮಗಳು ಹೊಂಬಾಳೆಯನ್ನು ಮದುವೆಯಾಗಿದ್ದಾರೆ. ಅಭಿಷೇಕ್ ಮದುವೆಗೆ ಕಲಾವಿದರು, ಸ್ನೇಹಿತರು, ಸಂಬಂಧಿಕರು ಆಗಮಿಸಿ ಶುಭಕೋರಿದರು.