ಬೆಂಗಳೂರು: ಕೆಂಡ ಹಾಯುವಾಗ ಆಕಸ್ಮಿಕವಾಗಿ ಮುಗ್ಗರಿಸಿ ಬಿದ್ದು ಮಹಿಳೆಯೊಬ್ಬರು ತೀವ್ರವಾಗಿ ಗಾಯಗೊಂಡಿರುವ ದಾರುಣ ಘಟನೆ ನಗರದ ಟಿ.ದಾಸರಹಳ್ಳಿಯ ಬಾಗಲಗುಂಟೆ ಬಳಿ ಘಟನೆ ನಡೆದಿದೆ.
ಕೆಂಡಕ್ಕೆ ಬಿದ್ದ ಮಹಿಳೆಯನ್ನು ಗೌರಮ್ಮ ಎಂದು ಗುರುತಿಸಲಾಗಿದೆ. ಬಾಗಲಗುಂಟೆ ಗ್ರಾಮದೇವತೆ ಉತ್ಸವದ ವೇಳೆ ಅವಘಡ ಸಂಭವಿಸಿದೆ.
ಗೌರಮ್ಮ ಅವರು ದೇವರಿಗೆ ಹರಕೆ ಮಾಡಿಕೊಂಡಿದ್ದು, ಕೆಂಡ ಹಾಯುವಾಗ ಆಕಸ್ಮಿಕವಾಗಿ ಮುಗ್ಗರಿಸಿ ಬಿದ್ದಿದ್ದಾರೆ. ತಕ್ಷಣ ಸ್ಥಳದಲ್ಲಿ ಸಾರ್ವಜನಿಕರು ಆಕೆಯನ್ನು ಮೇಲಕ್ಕೆಳೆದು ರಕ್ಷಿಸಿದ್ದಾರೆ. ಆದರೆ ಅದಾಗಲೇ ಗಂಭೀರ ಗಾಯಗೊಂಡಿರುವ ಅವರನ್ನು ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗ್ರಾಮ ದೇವತೆಯ ಜಾತ್ರೆ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದು, ಇಂದು ಜಾತ್ರೆಯ ಕೊನೆ ಆಚರಣೆಯಾಗಿ ಕೆಂಡಾ ಹಾಯುವ ಸಾಂಪ್ರಾದಾಯಿಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಘಟನೆಯಿಂದ ದೇವಾಲಯದ ಆವರಣದಲ್ಲಿ ಅತಂಕದ ವಾತಾವರಣ ನಿರ್ಮಾಣವಾಗಿದೆ.
ಕಳೆದ ಎರಡು ವರ್ಷಗಳ ಹಿಂದೆ ದೇವಾಲಯದ ಆರ್ಚರು ಕೆಂಡ ಹಾಯುವಾಗ ಜಾರಿ ಬಿದ್ದು, ತೀವ್ರವಾಗಿ ಗಾಯಗೊಂಡಿದ್ದರು.