ಮುಂಬೈ: ರಾಜಸ್ಥಾನ ರಾಯಲ್ಸ್ ವಿರುದ್ಧ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಸೋಲುಂಡ ಬಳಿಕ ತಂಡದ ಮೆಂಟರ್ ಸೆಹ್ವಾಗ್ ಹಾಗೂ ಕೋ-ಓನರ್ ಪ್ರೀತಿ ಜಿಂಟಾ ನಡುವೆ ಎಲ್ಲವೂ ಸರಿ ಇಲ್ಲವೇ ಎನ್ನುವ ಪ್ರಶ್ನೆ ಎದ್ದಿದೆ.
ರಾಜಸ್ಥಾನದ ವಿರುದ್ಧ ಪಂದ್ಯದಲ್ಲಿ ಸುಲಭ ಮೊತ್ತವನ್ನು ಬೆನ್ನತ್ತಲು ತಂಡ ವಿಫಲವಾಗಲು ಮೆಂಟರ್ ಸೆಹ್ವಾಗ್ ಅವರ ನಿರ್ಧಾರವೇ ಕಾರಣ ಎಂದು ಪ್ರೀತಿ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.
ಅಂದಹಾಗೇ ರಾಜಸ್ಥಾನ ಪಂದ್ಯದಲ್ಲಿ ನಾಯಕ ಆಶ್ವಿನ್ಗೆ ಬ್ಯಾಟಿಂಗ್ ನಲ್ಲಿ ಮುಂಬಡ್ತಿ ನೀಡಿ ನಂಬರ್ 3 ಸ್ಥಾನದಲ್ಲಿ ಕಳಿಸಲಾಗಿತ್ತು. ಆದರೆ ಪಂದ್ಯದಲ್ಲಿ ಅಶ್ವಿನ್ ಶೂನ್ಯ ಸುತ್ತುವ ಮೂಲಕ ಎಲ್ಲ ಲೆಕ್ಕಾಚಾರನ್ನು ತಲೆ ಕೆಳಗೆ ಮಾಡಿದ್ದರು. ಸದ್ಯ ಪಂದ್ಯದ ಫಲಿತಾಂಶದಿಂದ ಪ್ರೀತಿ ಅಸಮಾಧಾನಗೊಂಡಿದ್ದರೆ ಎನ್ನಲಾಗಿದೆ.
ಪಂದ್ಯದ ಬಳಿಕ ಆಟಗಾರರು ಮೈದಾನದಿಂದ ಮರಳುವ ಮುನ್ನವೇ ಪ್ರೀತಿ ಜಿಂಟಾ ಈ ಕುರಿತು ಪ್ರಶ್ನೆ ಮಾಡಿದ್ದರು. ಆದ್ರೆ ಸೆಹ್ವಾಗ್ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ತಂಡ ಉತ್ತಮ ಪ್ರದರ್ಶನ ನೀಡುತ್ತಿದ್ದು, ಪ್ಲೇಆಫ್ ಗೆ ಆಯ್ಕೆ ಆಗುವ ಎಲ್ಲಾ ಅವಕಾಶ ಇರುವ ವೇಳೆ ಈ ರೀತಿಯ ಗೊಂದಲಗಳಿಗೆ ಅವಕಾಶ ನೀಡಬಾರದು. ಇದು ಆಟಗಾರ ಮೇಲೆ ಪರಿಣಾಮ ಉಂಟಾಗಬಹುದು ಎಂದು ಸೆಹ್ವಾಗ್ ಪ್ರತಿಕ್ರಿಯೇ ನೀಡಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಈ ಕುರಿತು ಮಾಧ್ಯಮಗಳು ಸೆಹ್ವಾಗ್ ಹಾಗೂ ಪ್ರೀತಿ ಜಿಂಟಾ ಅವರ ಪ್ರತಿಕ್ರಿಯೆಗಳನ್ನು ಕೇಳಿದ್ದು, ಇಬ್ಬರು ಈ ಕುರಿತು ಮಾತನಾಡಲು ನಿರಾಕರಿಸಿದ್ದಾರೆ. ಟೂರ್ನಿಯಲ್ಲಿ ಪಂಜಾಬ್ ಇದುವರೆಗೂ ಉತ್ತಮ ಪ್ರದರ್ಶನವನ್ನು ನೀಡಿದ್ದು, ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿದೆ. ಕಳೆದ ಬಾರಿ ಪಂಬಾಜ್ ಪರ ಬ್ಯಾಟ್ ಬೀಸಿದ್ದ ಸೆಹ್ವಾಗ್ ಈ ಬಾರಿ ತಂಡದ ಮೆಂಟರ್ ಆಗಿ ಕಾರ್ಯನಿರ್ವಹಿಸಿದ್ದರು. ಅಲ್ಲದೇ ತಂಡದ ನಾಯಕತ್ವ ಸ್ಥಾನಕ್ಕೆ ಆಶ್ವಿನ್ ಆಯ್ಕೆ ಹಾಗೂ ಕ್ರಿಸ್ಗೇಲ್ ಖರೀದಿ ವೇಳೆಯೂ ಸೆಹ್ವಾಗ್ ಸಲಹೆಯನ್ನು ಪಡೆಯಲಾಗಿತ್ತು.