ಚಿಕ್ಕಬಳ್ಳಾಪುರ: ಶಾಸಕರ ಪಿಎ ಅಂತ ಹೇಳಿ ದರ್ಬಾರ್ ನಡೆಸಿದ ಸಾಯಿಕೃಷ್ಣ ಚಾರಿಟಬಲ್ ಟ್ರಸ್ಟ್ ನ ಸಿಬ್ಬಂದಿ ಮೇಲೆ ಗ್ರಾಮಸ್ಥರು ಹಲ್ಲೆ ಮಾಡಲು ಮುಂದಾದ ಘಟನೆ ಚಿಕ್ಕಬಳ್ಳಾಪುರ ತಾಲೂಕು ಆವಲಗುರ್ಕಿ ಗ್ರಾಮದಲ್ಲಿ ನಡೆದಿದೆ.
ಶಾಸಕ ಡಾ.ಕೆ.ಸುಧಾಕರ್ ಒಡೆತನದ ಶ್ರೀ ಸಾಯಿಕೃಷ್ಣ ಚಾರಿಟೇಬಲ್ ಟ್ರಸ್ಟ್ ನ ಸಿಬ್ಬಂದಿ ಅವಿನಾಶ್ ನನ್ನ ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು ಮರಕ್ಕೆ ಕಟ್ಟಿ ಹಾಕಲು ಯತ್ನಿಸಿದರು.
ಅವಲಗುರ್ಕಿ ಗ್ರಾಮದಲ್ಲಿ ಜಿಲ್ಲಾಡಳಿತ ವತಿಯಿಂದ ಕೊಳವೆಬಾವಿ ಕೊರೆಸಲಾಗುತ್ತಿದ್ದು ನೀರು ಸಿಗದೆ ವೈಫಲ್ಯವಾಗಿದೆ. ಹೀಗಾಗಿ ಮತ್ತೊಂದು ಕೊಳವೆಬಾವಿ ಕೊರೆಯುವಂತೆ ಗ್ರಾಮಸ್ಥರು ಪಟ್ಟು ಹಿಡಿದು ಬೋರ್ ವೆಲ್ ಲಾರಿ ಅಡ್ಡಗಟ್ಟಿ ಪ್ರತಿಭಟನೆ ನಡೆಸುತ್ತಿದ್ದರು. ಆದ್ರೆ ಈ ವೇಳೆ ಸ್ಥಳಕ್ಕೆ ಬಂದ ಅವಿನಾಶ್ ಗ್ರಾಮಸ್ಥರಿಗೆ ಮಾಹಿತಿ ನೀಡದೆ ಸ್ಥಳದಿಂದ ಬೋರ್ ವೆಲ್ ಲಾರಿಯನ್ನ ಕಳುಹಿಸಿದ್ದಾನೆ. ಇದ್ರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಬೋರ್ ವೆಲ್ ಲಾರಿ ಅಡ್ಡಗಟ್ಟಿ, ಅವಿನಾಶ್ ನನ್ನ ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.