ಶ್ರೀನಗರ: ಸೋಮವಾರ ಪಾಕಿಸ್ತಾನ ಕದನ ವಿರಾಮವನ್ನು ಉಲ್ಲಂಘನೆ ಮಾಡಿದ್ದು, ಪೂಂಚ್ ಜಿಲ್ಲೆಯ ಕೆರ್ನಿ ಮತ್ತು ದಿಗ್ವಾರ್ ವಲಯದ ಗಡಿ (ಎಲ್ಒಸಿ) ಪ್ರದೇಶದಲ್ಲಿ ದಾಳಿ ನಡೆಸಿದೆ.
ಈ ದಾಳಿಯಲ್ಲಿ 10 ವರ್ಷದ ಬಾಲಕ ಮತ್ತು ಬಾಲಕಿ ಮೃತ ಪಟ್ಟಿದ್ದು, 9 ಜನ ತೀವ್ರವಾಗಿ ಗಾಯಗೊಂಡಿದ್ದಾರೆ. ಪಾಕ್ ಅಪ್ರಚೋದಿತ ದಾಳಿಗೆ ಭಾರತದ ಸೈನಿಕರು ಸೂಕ್ತ ಪ್ರತ್ಯುತ್ತರವನ್ನು ನೀಡಿದ್ದಾರೆ. ಎರಡೂ ಸೇನೆಯ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
- Advertisement 2
ಪಾಕ್ ಸೈನಿಕರು ಭಾರತೀಯ ಸೈನಿಕರನ್ನು ಗುರಿಯಾಗಿಸಿಕೊಂಡು ಶೆಲ್ ಹಾಗೂ ಗುಂಡಿನ ದಾಳಿಯನ್ನು ನಡೆಸಿದೆ. ಇದಕ್ಕೆ ಭಾರತೀಯ ಸೇನೆ ತಿರುಗೇಟು ನೀಡಿದೆ. ಪರಸ್ಪರ ಗುಂಡಿನ ದಾಳಿ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ.
- Advertisement 3