ಹಾಸನ: ನೀವು ರಾಜಕೀಯ ಪ್ರವೇಶ ಮಾಡ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್, ನನಗೆ ರಾಜಕೀಯ ಇಷ್ಟ ಇಲ್ಲ. ಹೀಗಾಗಿ ಆ ಕ್ಷೇತ್ರಕ್ಕೆ ನಾನು ಪ್ರವೇಶ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಹಾಸನದಲ್ಲಿ ನೂತನವಾಗಿ ಆರಂಭವಾಗಿರುವ ಖಾಸಾಗಿ ಜ್ಯುವೆಲರ್ಸ್ ಮಳಿಗೆ ಉದ್ಘಾಟಿಸಿ ಮಾತನಾಡಿದ ಅವರು, ನಾನು ರಾಜಕೀಯ ಸೇರುತ್ತೇನೆ ಅನ್ನೋದು ಸುಳ್ಳು. ಒಂದು ವೇಳೆ ರಾಜಕೀಯಕ್ಕೆ ಬಂದ್ರೆ ಮೊದಲು ಜನರಿಗೆ ತಿಳಿಸುತ್ತೇನೆ ಎಂದು ತಿಳಿಸಿದ್ರು.
ಇದೇ ವೇಳೆ ಶಿವರಾಜ್ಕುಮಾರ್, ಪತ್ನಿ ಗೀತಾ ಅವರು ಮತ್ತೆ ಚುನಾವಣೆಗೆ ನಿಲ್ಲುವ ಬಗ್ಗೆಯೂ ಅಲ್ಲಗಳೆದರು. ಅಮ್ಮನ ಸಾವಿನ ಹಿನ್ನೆಲೆಯಲ್ಲಿ ಸಾಂತ್ವನ ಹೇಳಲು ರಾಹುಲ್ ಗಾಂಧಿ ಬಂದಿದ್ದರು. ಅವರ ಬಗ್ಗೆ ಗೌರವವಿದೆ. ಅಂದಮಾತ್ರಕ್ಕೆ ರಾಜಕೀಯಕ್ಕೆ ಬರುತ್ತೇವೆ ಎಂಬುದು ಸುಳ್ಳು ಅಂದ್ರು.
ಖಾಸಗಿ ಜ್ಯುವೆಲರ್ ಮಳಿಗೆ ಹಾಸನದಲ್ಲಿ ಆರಂಭವಾಗಿರುವುದು ಖುಷಿ ತಂದಿದೆ. ಆ ಸಂಸ್ಥೆಯ ರಾಯಭಾರಿಯಾಗಿರುವುದು ಸಂತಸ ತಂದಿದೆ ಎಂದು ಶಿವರಾಜ್ಕುಮಾರ್ ಹೇಳಿದ್ರು.